‘ಪರಿಶಿಷ್ಟ ಜಾತಿ ಸಮುದಾಯವಾದ ಭೋವಿ ಸಮುದಾಯದವರ ಮೇಲೆ ಗ್ರಾಮೀಣ ಭಾಗದಲ್ಲಿ ದೌರ್ಜನ್ಯ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ, ಪೊಲೀಸರು ನಿರ್ಲಕ್ಷ್ಯ ಮಾಡದೆ ತಕ್ಷಣ ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು. ಆದರೆ, ಹಲವೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪ್ರಕರಣವೇ ದಾಖಲಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.