<p><strong>ಹುಬ್ಬಳ್ಳಿ:</strong> ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ, ಮುಂಜಾಗ್ರತೆಯಾಗಿ ಇಲ್ಲಿನ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಯಲ್ಲಿ ಮಕ್ಕಳಿಗೆ ಸಿರಪ್ ನೀಡುವುದನ್ನು ನಿಲ್ಲಿಸಲಾಗಿದೆ.</p>.<p>ಈ ಕುರಿತು ಆಸ್ಪತ್ರೆಯ ಆಡಳಿತ ಮಂಡಳಿ ಮಕ್ಕಳ ವಿಭಾಗದ ವೈದ್ಯರಿಗೆ ಸೂಚನೆ ನೀಡಿದೆ. ಯಾವುದೇ ಕಂಪನಿಯ ಸಿರಪ್ ಅನ್ನು ಎರಡು ವರ್ಷದ ಒಳಗಿನ ಮಕ್ಕಳಿಗೆ ನೀಡಬಾರದು ಎಂದು ತಿಳಿಸಿದೆ. </p>.<p>‘ಸಿರಪ್ ಸೇವನೆಯಿಂದ ಮಕ್ಕಳಿಗೆ ವ್ಯತಿರಿಕ್ತ ಪರಿಣಾಮ ಉಂಟಾದ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಮುಂಜಾಗ್ರತೆಯಾಗಿ ನಾವು ಸಿರಪ್ ನೀಡುತ್ತಿಲ್ಲ. ಸದ್ಯ ಮಾತ್ರೆಗಳನ್ನಷ್ಟೇ ನೀಡುವಂತೆ ಮಕ್ಕಳ ತಜ್ಞರಿಗೆ ತಿಳಿಸಲಾಗಿದೆ’ ಎಂದು ಕೆಎಂಸಿ–ಆರ್ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಈಶ್ವರ ಹಸಬಿ ತಿಳಿಸಿದರು.</p>.<p>‘ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೋಲ್ಡ್ರಿಫ್ ಸಿರಪ್ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಆಗುತ್ತಿಲ್ಲ. ಖಾಸಗಿ ಔಷಧ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆಯೇ ಎಂದೂ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿಯೂ ಆ ಸಿರಪ್ ಮಾರಾಟವಾಗುತ್ತಿಲ್ಲ’ ಎಂದು ಧಾರವಾಡ ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಸಂಜಯ್ ಮುದಗಲ್ ಹೇಳಿದರು.</p>.<p>‘ಶೀತ, ಜ್ವರ, ಕೆಮ್ಮಿನಿಂದ ಬಳಲುತ್ತಿರುವ ಮಕ್ಕಳನ್ನು ನಗರದ ಕ್ಲಿನಿಕ್, ಖಾಸಗಿ, ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಪಾಲಕರು, ಸಿರಪ್ ಬದಲು ಮಾತ್ರೆ ನೀಡುವಂತೆ ವಿನಂತಿಸುತ್ತಿದ್ದಾರೆ. ವಯಸ್ಕರು ಸಹ ಸಿರಪ್ ಸೇವಿಸಲು ಭಯ ಪಡುತ್ತಿದ್ದಾರೆ’ ಎಂದು ವೈದ್ಯರೊಬ್ಬರು ಹೇಳಿದರು.</p>.<div><blockquote>ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್ ಕುರಿತು ಆರೋಗ್ಯ ಇಲಾಖೆಯಿಂದ ಯಾವುದೇ ಆದೇಶ ಬಂದಿಲ್ಲ. ಕೆಲವು ಆಸ್ಪತ್ರೆಗಳು ಸ್ವಯಂಪ್ರೇರಿತವಾಗಿ ಮಕ್ಕಳಿಗೆ ಸಿರಪ್ ಕೊಡುವುದನ್ನು ನಿಲ್ಲಿಸಿವೆ </blockquote><span class="attribution">ಡಾ.ಎಸ್.ಎಂ. ಹೊನಕೇರಿ ಜಿಲ್ಲಾ ಆರೋಗ್ಯಾಧಿಕಾರಿ ಧಾರವಾಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ, ಮುಂಜಾಗ್ರತೆಯಾಗಿ ಇಲ್ಲಿನ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಯಲ್ಲಿ ಮಕ್ಕಳಿಗೆ ಸಿರಪ್ ನೀಡುವುದನ್ನು ನಿಲ್ಲಿಸಲಾಗಿದೆ.</p>.<p>ಈ ಕುರಿತು ಆಸ್ಪತ್ರೆಯ ಆಡಳಿತ ಮಂಡಳಿ ಮಕ್ಕಳ ವಿಭಾಗದ ವೈದ್ಯರಿಗೆ ಸೂಚನೆ ನೀಡಿದೆ. ಯಾವುದೇ ಕಂಪನಿಯ ಸಿರಪ್ ಅನ್ನು ಎರಡು ವರ್ಷದ ಒಳಗಿನ ಮಕ್ಕಳಿಗೆ ನೀಡಬಾರದು ಎಂದು ತಿಳಿಸಿದೆ. </p>.<p>‘ಸಿರಪ್ ಸೇವನೆಯಿಂದ ಮಕ್ಕಳಿಗೆ ವ್ಯತಿರಿಕ್ತ ಪರಿಣಾಮ ಉಂಟಾದ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಮುಂಜಾಗ್ರತೆಯಾಗಿ ನಾವು ಸಿರಪ್ ನೀಡುತ್ತಿಲ್ಲ. ಸದ್ಯ ಮಾತ್ರೆಗಳನ್ನಷ್ಟೇ ನೀಡುವಂತೆ ಮಕ್ಕಳ ತಜ್ಞರಿಗೆ ತಿಳಿಸಲಾಗಿದೆ’ ಎಂದು ಕೆಎಂಸಿ–ಆರ್ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಈಶ್ವರ ಹಸಬಿ ತಿಳಿಸಿದರು.</p>.<p>‘ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೋಲ್ಡ್ರಿಫ್ ಸಿರಪ್ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಆಗುತ್ತಿಲ್ಲ. ಖಾಸಗಿ ಔಷಧ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆಯೇ ಎಂದೂ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿಯೂ ಆ ಸಿರಪ್ ಮಾರಾಟವಾಗುತ್ತಿಲ್ಲ’ ಎಂದು ಧಾರವಾಡ ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಸಂಜಯ್ ಮುದಗಲ್ ಹೇಳಿದರು.</p>.<p>‘ಶೀತ, ಜ್ವರ, ಕೆಮ್ಮಿನಿಂದ ಬಳಲುತ್ತಿರುವ ಮಕ್ಕಳನ್ನು ನಗರದ ಕ್ಲಿನಿಕ್, ಖಾಸಗಿ, ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ಪಾಲಕರು, ಸಿರಪ್ ಬದಲು ಮಾತ್ರೆ ನೀಡುವಂತೆ ವಿನಂತಿಸುತ್ತಿದ್ದಾರೆ. ವಯಸ್ಕರು ಸಹ ಸಿರಪ್ ಸೇವಿಸಲು ಭಯ ಪಡುತ್ತಿದ್ದಾರೆ’ ಎಂದು ವೈದ್ಯರೊಬ್ಬರು ಹೇಳಿದರು.</p>.<div><blockquote>ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್ ಕುರಿತು ಆರೋಗ್ಯ ಇಲಾಖೆಯಿಂದ ಯಾವುದೇ ಆದೇಶ ಬಂದಿಲ್ಲ. ಕೆಲವು ಆಸ್ಪತ್ರೆಗಳು ಸ್ವಯಂಪ್ರೇರಿತವಾಗಿ ಮಕ್ಕಳಿಗೆ ಸಿರಪ್ ಕೊಡುವುದನ್ನು ನಿಲ್ಲಿಸಿವೆ </blockquote><span class="attribution">ಡಾ.ಎಸ್.ಎಂ. ಹೊನಕೇರಿ ಜಿಲ್ಲಾ ಆರೋಗ್ಯಾಧಿಕಾರಿ ಧಾರವಾಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>