ಹುಬ್ಬಳ್ಳಿ: ಜಿಂದಾಲ್ ಕಾರ್ಖಾನೆ ನೌಕರರಲ್ಲಿ ಕೋವಿಡ್-19 ಹೆಚ್ಚಿರುವುದರ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಆನಂದ್ ಸಿಂಗ್ ಅವರು ಬೆಳಿಗ್ಗೆ ನನ್ನೊಂದಿಗೆ ಜಿಂದಾಲ್ ಕಾರ್ಖಾನೆ ಬಗ್ಗೆ ಮಾತನಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದರು.
ಇಂದಿನ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಪ್ರಶ್ನೆ ಇಲ್ಲ. ಜುಲೈ 7ರ ನಂತರ ಪರಿಸ್ಥಿತಿ ಆಧರಿಸಿ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು