ಹುಬ್ಬಳ್ಳಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 30ರಂದು ನಗರಕ್ಕೆ ಭೇಟಿ ನೀಡಿದ್ದಾಗ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿ, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ₹10 ಸಾವಿರ ದಂಡ ವಿಧಿಸಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ ನಡೆದ ಉಲ್ಲಂಘನೆಗೆ ಒಮ್ಮೆ ₹2 ಸಾವಿರ, ಮತ್ತೊಮ್ಮೆ ₹8 ಸಾವಿರ ದಂಡ ವಿಧಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.