<p><strong>ಹುಬ್ಬಳ್ಳಿ:</strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 30ರಂದು ನಗರಕ್ಕೆ ಭೇಟಿ ನೀಡಿದ್ದಾಗ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿ, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ₹10 ಸಾವಿರ ದಂಡ ವಿಧಿಸಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ ನಡೆದ ಉಲ್ಲಂಘನೆಗೆ ಒಮ್ಮೆ ₹2 ಸಾವಿರ, ಮತ್ತೊಮ್ಮೆ ₹8 ಸಾವಿರ ದಂಡ ವಿಧಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹೆಚ್ಚಿನ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳದೆ ಜಮಾಯಿಸಿದ್ದರು. ₹2 ಸಾವಿರ ದಂಡ ವಿಧಿಸಲಾಗಿತ್ತು. ಅವರಿಗೆ ಸ್ವಾಗತ ಕೋರಲು ರಸ್ತೆಯಲ್ಲಿ ನಿಯಮಬಾಹಿರವಾಗಿ ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಹಾಕಿದ್ದಕ್ಕಾಗಿ ₹8 ಸಾವಿರ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p><strong>ಬಿಜೆಪಿ ಆಣತಿಯಂತೆ ದಂಡ: </strong>‘ಪಾಲಿಕೆ ಅಧಿಕಾರಿಗಳು ಬಿಜೆಪಿ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಮೊದಲು ₹2 ಸಾವಿರ ದಂಡ ಹಾಕಿ, ನಂತರ ಮತ್ತೆ ₹8 ಸಾವಿರ ದಂಡ ವಿಧಿಸಿದ್ದಾರೆ. ಇದು ಅಧಿಕಾರಿಗಳ ಇಬ್ಬಗೆಯ ನೀತಿಗೆ ಸಾಕ್ಷಿಯಾಗಿದೆ. ನಗರದಲ್ಲಿ ಸಚಿವರು ನಡೆಸುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿರುತ್ತದೆ. ಆಗ, ಅಧಿಕಾರಿಗಳು ಎಲ್ಲಿ ಹೋಗಿರುತ್ತಾರೆ’ ಎಂದು ದಂಡ ಪಾವತಿಸಿರುವ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 30ರಂದು ನಗರಕ್ಕೆ ಭೇಟಿ ನೀಡಿದ್ದಾಗ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿ, ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ₹10 ಸಾವಿರ ದಂಡ ವಿಧಿಸಿದ್ದಾರೆ. ಒಂದೇ ಕಾರ್ಯಕ್ರಮದಲ್ಲಿ ನಡೆದ ಉಲ್ಲಂಘನೆಗೆ ಒಮ್ಮೆ ₹2 ಸಾವಿರ, ಮತ್ತೊಮ್ಮೆ ₹8 ಸಾವಿರ ದಂಡ ವಿಧಿಸಿರುವುದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಹೆಚ್ಚಿನ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳದೆ ಜಮಾಯಿಸಿದ್ದರು. ₹2 ಸಾವಿರ ದಂಡ ವಿಧಿಸಲಾಗಿತ್ತು. ಅವರಿಗೆ ಸ್ವಾಗತ ಕೋರಲು ರಸ್ತೆಯಲ್ಲಿ ನಿಯಮಬಾಹಿರವಾಗಿ ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಹಾಕಿದ್ದಕ್ಕಾಗಿ ₹8 ಸಾವಿರ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p><strong>ಬಿಜೆಪಿ ಆಣತಿಯಂತೆ ದಂಡ: </strong>‘ಪಾಲಿಕೆ ಅಧಿಕಾರಿಗಳು ಬಿಜೆಪಿ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಮೊದಲು ₹2 ಸಾವಿರ ದಂಡ ಹಾಕಿ, ನಂತರ ಮತ್ತೆ ₹8 ಸಾವಿರ ದಂಡ ವಿಧಿಸಿದ್ದಾರೆ. ಇದು ಅಧಿಕಾರಿಗಳ ಇಬ್ಬಗೆಯ ನೀತಿಗೆ ಸಾಕ್ಷಿಯಾಗಿದೆ. ನಗರದಲ್ಲಿ ಸಚಿವರು ನಡೆಸುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿರುತ್ತದೆ. ಆಗ, ಅಧಿಕಾರಿಗಳು ಎಲ್ಲಿ ಹೋಗಿರುತ್ತಾರೆ’ ಎಂದು ದಂಡ ಪಾವತಿಸಿರುವ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>