ಎಲ್ಲರಿಗೂ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ 1,822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಜೆ. ಪಾಟೀಲ ತಿಳಿಸಿದ್ದಾರೆ.
ವರದಿಯಾಗಿರುವ 281 ಪ್ರಕರಣಗಳಲ್ಲಿ, ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ. ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.