<p><strong>ಹುಬ್ಬಳ್ಳಿ</strong>: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಕೋವಿಶೀಲ್ಡ್ ಲಸಿಕೆ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, 60 ವರ್ಷ ಮೇಲ್ಪಟ್ಟವರಿಗೆ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 45-59 ವರ್ಷದೊಳಗಿನವರಿಗೆಎರಡನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕೊರೊನಾ ಸೋಂಕು ತಡೆಯುವ ಕೋವಿಶೀಲ್ಡ್ ಬಗ್ಗೆ ಕೆಲವರಲ್ಲಿ ಆತಂಕವಿದೆ. ಅದನ್ನು ಹೋಗಲಾಡಿಸುವುದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಮುಖ್ಯಸ್ಥರು ಲಸಿಕೆ ಪಡೆಯುತ್ತಿದ್ದೇವೆ. ಸರ್ಕಾರದ ಕ್ರಮಗಳಿಂದಾಗಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ 28 ಸಾವಿರ ಮಂದಿಗೆ ಲಸಿಕೆ ನೀಡಲು ಗುರುತಿಸಲಾಗಿತ್ತು. ಆ ಪೈಕಿ ಮೊದಲ ಹಂತದಲ್ಲಿ 19,545 ಜನ ಲಸಿಕೆ ಪಡೆದಿದ್ದಾರೆ. 7,175 ಮಂದಿ ಎರಡನೇ ಸುತ್ತಿನ ಲಸಿಕೆ ಹಾಕಿಸಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ₹250 ಶುಲ್ಕದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಜನ ಸ್ವಇಚ್ಛೆಯಿಂದ ಬಂದು ಲಸಿಕೆ ಪಡೆಯಬೇಕು’ ಎಂದು ಹೇಳಿದರು.</p>.<p>ಲಸಿಕೆ ಪಡೆದ ಶೆಟ್ಟರ್ ಸರ್ಕಿಟ್ ಹೌಸ್ಗೆ ತೆರಳು ಅರ್ಧ ತಾಸು ವಿಶ್ರಾಂತಿ ಪಡೆದರು. ಶುಶ್ರೂಷಾಧಿಕಾರಿಗಳಾದ ಸುಜಾತ ಜೆ., ಹೇಮಾ ಹಾಗೂ ಪ್ರದೀಪ್ ಅವರ ತಂಡ ಸಚಿವ ಶೆಟ್ಟರ್ಗೆ ಲಸಿಕೆ ನೀಡಿತು.</p>.<p><strong>ಏಳು ಕಡೆ ಲಸಿಕೆ ಲಭ್ಯ: </strong>ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಜಿಲ್ಲಾಸ್ಪತ್ರೆ, ಕಲಘಟಗಿ, ಕುಂದಗೋಳ, ನವಲಗುಂದದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಹುಬ್ಬಳ್ಳಿಯ ಖಾಸಗಿ ಸುಚಿರಾಯು ಹಾಗೂ ಎಸ್ಡಿಎಂ ಆಸ್ಪತ್ರೆಯಲ್ಲಿ ಶುಲ್ಕಸಹಿತ ಲಸಿಕೆ ಸಿಗಲಿದೆ.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ,ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ, ಜಿಲ್ಲಾ ವೈದ್ಯಾಧಿಕಾರಿ ಡಾ. ಯಶವಂತ ಮದೀನಕರ, ಸಾಬೂನು ಮತ್ತು ಮಾರ್ಜಕ ನಿಯಮಿತದ ನಿರ್ದೇಶಕ ಮಲ್ಲಿಕಾರ್ಜುನ ಸಾವಕಾರ, ಬಿಜೆಪಿ ಮುಖಂಡ ಸಂತೋಷ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಕೋವಿಶೀಲ್ಡ್ ಲಸಿಕೆ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, 60 ವರ್ಷ ಮೇಲ್ಪಟ್ಟವರಿಗೆ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 45-59 ವರ್ಷದೊಳಗಿನವರಿಗೆಎರಡನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ‘ಕೊರೊನಾ ಸೋಂಕು ತಡೆಯುವ ಕೋವಿಶೀಲ್ಡ್ ಬಗ್ಗೆ ಕೆಲವರಲ್ಲಿ ಆತಂಕವಿದೆ. ಅದನ್ನು ಹೋಗಲಾಡಿಸುವುದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಇಲಾಖೆಗಳ ಮುಖ್ಯಸ್ಥರು ಲಸಿಕೆ ಪಡೆಯುತ್ತಿದ್ದೇವೆ. ಸರ್ಕಾರದ ಕ್ರಮಗಳಿಂದಾಗಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ 28 ಸಾವಿರ ಮಂದಿಗೆ ಲಸಿಕೆ ನೀಡಲು ಗುರುತಿಸಲಾಗಿತ್ತು. ಆ ಪೈಕಿ ಮೊದಲ ಹಂತದಲ್ಲಿ 19,545 ಜನ ಲಸಿಕೆ ಪಡೆದಿದ್ದಾರೆ. 7,175 ಮಂದಿ ಎರಡನೇ ಸುತ್ತಿನ ಲಸಿಕೆ ಹಾಕಿಸಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ₹250 ಶುಲ್ಕದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಜನ ಸ್ವಇಚ್ಛೆಯಿಂದ ಬಂದು ಲಸಿಕೆ ಪಡೆಯಬೇಕು’ ಎಂದು ಹೇಳಿದರು.</p>.<p>ಲಸಿಕೆ ಪಡೆದ ಶೆಟ್ಟರ್ ಸರ್ಕಿಟ್ ಹೌಸ್ಗೆ ತೆರಳು ಅರ್ಧ ತಾಸು ವಿಶ್ರಾಂತಿ ಪಡೆದರು. ಶುಶ್ರೂಷಾಧಿಕಾರಿಗಳಾದ ಸುಜಾತ ಜೆ., ಹೇಮಾ ಹಾಗೂ ಪ್ರದೀಪ್ ಅವರ ತಂಡ ಸಚಿವ ಶೆಟ್ಟರ್ಗೆ ಲಸಿಕೆ ನೀಡಿತು.</p>.<p><strong>ಏಳು ಕಡೆ ಲಸಿಕೆ ಲಭ್ಯ: </strong>ಹುಬ್ಬಳ್ಳಿಯ ಕಿಮ್ಸ್, ಧಾರವಾಡದ ಜಿಲ್ಲಾಸ್ಪತ್ರೆ, ಕಲಘಟಗಿ, ಕುಂದಗೋಳ, ನವಲಗುಂದದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಹುಬ್ಬಳ್ಳಿಯ ಖಾಸಗಿ ಸುಚಿರಾಯು ಹಾಗೂ ಎಸ್ಡಿಎಂ ಆಸ್ಪತ್ರೆಯಲ್ಲಿ ಶುಲ್ಕಸಹಿತ ಲಸಿಕೆ ಸಿಗಲಿದೆ.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ,ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ, ಜಿಲ್ಲಾ ವೈದ್ಯಾಧಿಕಾರಿ ಡಾ. ಯಶವಂತ ಮದೀನಕರ, ಸಾಬೂನು ಮತ್ತು ಮಾರ್ಜಕ ನಿಯಮಿತದ ನಿರ್ದೇಶಕ ಮಲ್ಲಿಕಾರ್ಜುನ ಸಾವಕಾರ, ಬಿಜೆಪಿ ಮುಖಂಡ ಸಂತೋಷ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>