ಸಿಪಿಐ (ಎಂ) ಜಿಲ್ಲಾ ಘಟಕದ ಕಾರ್ಯದರ್ಶಿ ಮಹೇಶ ಪತ್ತಾರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ವಿವಿಧ ಕ್ಷೇತ್ರಗಳಿಂದ ವಿಧಾನಪರಿಷತ್ಗೆ ಆಯ್ಕೆಯಾಗುವ ಸದಸ್ಯರಿಗೆ ಆಯಾ ಕ್ಷೇತ್ರದ ಬಗ್ಗೆ ಆಳವಾದ ಅನುಭವ ಮತ್ತು ಜ್ಞಾನ ಇರಬೇಕಾಗುತ್ತದೆ. ಇದುವರೆಗೆ ಆಯ್ಕೆಯಾದವರಲ್ಲಿ ಬಹುತೇಕರು ನೈಜ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ, ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ. ಸಂಘಟನೆ ಮತ್ತು ಹೋರಾಟದ ಹಿನ್ನಲೆ ಇರುವ ಗುರಿಕಾರ ಅವರನ್ನು ಬೆಂಬಲಿಸುತ್ತೇವೆ. ಮತದಾರರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು’ ಎಂದು ಕೋರಿದರು.