ಆರೋಪಿಗಳು ಸಪ್ತಾಪೂರ ಬಡಾವಣೆಯ ಸ್ಪಂದನಾ ಆಸ್ಪತ್ರೆಯ ಬಳಿ ರಸ್ತೆ ಬದಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು. ಎಸಿಪಿ ಜಿ.ಅನುಷಾ ಅವರ ಮಾರ್ಗದರ್ಶನದಲ್ಲಿ ಉಪನಗರ ಠಾಣೆಯ ಸಿಪಿಐ ಪ್ರಮೋದ ಯಲಿಗಾರ ಅವರ ನೇತೃತ್ವದಲ್ಲಿ ಪಿಎಸ್ಐ ಶ್ರೀಮಂತ ಹುಣಸಿಕಟ್ಟಿ, ಸಿಬ್ಬಂದಿ ಬಸವರಾಜ ಮಾಗುಂಡನವರ, ಕೆ.ಎಂ.ಡೊಕ್ಕನವರ, ಆರ್.ಎಚ್.ಬಡ್ನಿ, ಯು.ಡಿ.ಬಂಗಾರಿ, ಚೇತನ ಇಂಗಳಗಾವಿ ಮತ್ತು ಆನಂದ ಬಡಿಗೇರ ದಾಳಿ ನಡೆಸಿದೆ.