<p><strong>ಹುಬ್ಬಳ್ಳಿ:</strong> ಮಹಿಳೆಯನ್ನು ಪದೇಪದೇ ಹಿಂಬಾಲಿಸುತ್ತಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಉತ್ತರ ಪ್ರದೇಶ ಮೂಲದ, ಇಲ್ಲಿನ ಉಣಕಲ್ ನಿವಾಸಿ ರಾಮಜಾಸ್ ಯಾದವ್ ವಿರುದ್ಧ ಸ್ಥಳೀಯ 32 ವರ್ಷದ ಮಹಿಳೆ ದೂರು ನೀಡಿದ್ದಾರೆ. ಬೈರಿದೇವರಕೊಪ್ಪದ ದರ್ಗಾದ ಬಳಿಯ ಬಸ್ ಸ್ಟಾಪ್ ಬಳಿ ನಿಂತಿದ್ದಾಗ, ಮುಜುಗರ ಆಗುವ ರೀತಿಯಲ್ಲಿ ರಾಮಜಾಸ್ ಹಿಂಬಾಲಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p><strong>ಹೂಡಿಕೆ ನೆಪದಲ್ಲಿ ವಂಚನೆ:</strong> ಗೋಲ್ಡ್ ಮ್ಯಾನ್ ಸಚ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ವಿಕಾಸ ನಗರದ ಗಿರಿಶ ಅವರಿಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ, ಅವರಿಂದ ₹8.99 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.</p>.<p>ಗಿರೀಶ ಅವರಿಗೆ ಸಂದೇಶ ಕಳುಹಿಸಿದ ವಂಚಕ, ಅವರ ಫೋನ್ ನಂಬರ್ ಅನ್ನು ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿದ್ದಾನೆ. ಅದನ್ನು ನಂಬಿದ ಅವರು ಹಣ ವರ್ಗಾಯಿಸಿದ್ದಾರೆ.</p>.<p>ಅದೇ ರೀತಿ ಹಳೇಹುಬ್ಬಳ್ಳಿಯ ಉಸ್ಮಾನ್ ಜಮಾದಾರ್ ಅವರಿಗೂ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ ವಂಚಕರು, ಅವರಿಂದ ₹10.03 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣದ ದಾಖಲಾಗಿದೆ.</p>.<p><strong>ಗಾಂಜಾ ಮಾರಾಟ, ಆರೋಪಿ ಬಂಧನ:</strong> ಇಲ್ಲಿನ ಗದಗ ರಸ್ತೆಯ ಚೆಲ್ಲಿ ಮೈದಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿ, ₹74 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಕೇಶ್ವಾಪುರದ ಬಾಜಿಲ್ ಅಂಥೋನಿ ಬಂಧಿತ ಆರೋಪಿ. ಇನ್ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಪ್ರಕರಣ ದಾಖಲಾಗಿದೆ.</p>.<p><strong>ಇಬ್ಬರ ಬಂಧನ:</strong> ಇಲ್ಲಿನ ದೇಶಪಾಂಡೆನಗರ ಹಾಗೂ ಜನತಾ ಬಜಾರ್ ಬಳಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ದೇಶಪಾಂಡೆ ನಗರದಲ್ಲಿ ಅನುಮಾನಸ್ಪದವಾಗಿ ತಿರುಗುತ್ತಿದ್ದ ಜ್ಯೋತಿಬಾ ಗಟ್ಟಿ (24) ಹಾಗೂ ಜನತಾ ಬಜಾರ್ನಲ್ಲಿ ತಿರುಗಾಡುತ್ತಿದ್ದ ಮುಂಡಗೋಡದ ಶೆಟ್ಟೆಪ್ಪ ಬೋವಿವಡ್ಡರ (37) ವಿರುದ್ಧ ಪ್ರಕರಣ ದಾಖಲಾಗಿದೆ.</p>.<p><strong>ಲ್ಯಾಪ್ಟಾಪ್ ಕಳವು:</strong> ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸ್ಪೆಷಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಲ್ಲಿಯ ಹಳೇಹುಬ್ಬಳ್ಳಿಯ ಜುಬೇರಲಿ ಸವಣೂರ ಅವರ ₹45 ಸಾವಿರ ಮೌಲ್ಯದ ಲ್ಯಾಪ್ಟಾಪ್ ಇದ್ದ ಬ್ಯಾಗ್ ಕಳವು ಆಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಮಹಿಳೆಯನ್ನು ಪದೇಪದೇ ಹಿಂಬಾಲಿಸುತ್ತಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಉತ್ತರ ಪ್ರದೇಶ ಮೂಲದ, ಇಲ್ಲಿನ ಉಣಕಲ್ ನಿವಾಸಿ ರಾಮಜಾಸ್ ಯಾದವ್ ವಿರುದ್ಧ ಸ್ಥಳೀಯ 32 ವರ್ಷದ ಮಹಿಳೆ ದೂರು ನೀಡಿದ್ದಾರೆ. ಬೈರಿದೇವರಕೊಪ್ಪದ ದರ್ಗಾದ ಬಳಿಯ ಬಸ್ ಸ್ಟಾಪ್ ಬಳಿ ನಿಂತಿದ್ದಾಗ, ಮುಜುಗರ ಆಗುವ ರೀತಿಯಲ್ಲಿ ರಾಮಜಾಸ್ ಹಿಂಬಾಲಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p><strong>ಹೂಡಿಕೆ ನೆಪದಲ್ಲಿ ವಂಚನೆ:</strong> ಗೋಲ್ಡ್ ಮ್ಯಾನ್ ಸಚ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ವಿಕಾಸ ನಗರದ ಗಿರಿಶ ಅವರಿಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ, ಅವರಿಂದ ₹8.99 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.</p>.<p>ಗಿರೀಶ ಅವರಿಗೆ ಸಂದೇಶ ಕಳುಹಿಸಿದ ವಂಚಕ, ಅವರ ಫೋನ್ ನಂಬರ್ ಅನ್ನು ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿದ್ದಾನೆ. ಅದನ್ನು ನಂಬಿದ ಅವರು ಹಣ ವರ್ಗಾಯಿಸಿದ್ದಾರೆ.</p>.<p>ಅದೇ ರೀತಿ ಹಳೇಹುಬ್ಬಳ್ಳಿಯ ಉಸ್ಮಾನ್ ಜಮಾದಾರ್ ಅವರಿಗೂ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿದ ವಂಚಕರು, ಅವರಿಂದ ₹10.03 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣದ ದಾಖಲಾಗಿದೆ.</p>.<p><strong>ಗಾಂಜಾ ಮಾರಾಟ, ಆರೋಪಿ ಬಂಧನ:</strong> ಇಲ್ಲಿನ ಗದಗ ರಸ್ತೆಯ ಚೆಲ್ಲಿ ಮೈದಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿ, ₹74 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.</p>.<p>ಕೇಶ್ವಾಪುರದ ಬಾಜಿಲ್ ಅಂಥೋನಿ ಬಂಧಿತ ಆರೋಪಿ. ಇನ್ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಪ್ರಕರಣ ದಾಖಲಾಗಿದೆ.</p>.<p><strong>ಇಬ್ಬರ ಬಂಧನ:</strong> ಇಲ್ಲಿನ ದೇಶಪಾಂಡೆನಗರ ಹಾಗೂ ಜನತಾ ಬಜಾರ್ ಬಳಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ದೇಶಪಾಂಡೆ ನಗರದಲ್ಲಿ ಅನುಮಾನಸ್ಪದವಾಗಿ ತಿರುಗುತ್ತಿದ್ದ ಜ್ಯೋತಿಬಾ ಗಟ್ಟಿ (24) ಹಾಗೂ ಜನತಾ ಬಜಾರ್ನಲ್ಲಿ ತಿರುಗಾಡುತ್ತಿದ್ದ ಮುಂಡಗೋಡದ ಶೆಟ್ಟೆಪ್ಪ ಬೋವಿವಡ್ಡರ (37) ವಿರುದ್ಧ ಪ್ರಕರಣ ದಾಖಲಾಗಿದೆ.</p>.<p><strong>ಲ್ಯಾಪ್ಟಾಪ್ ಕಳವು:</strong> ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸ್ಪೆಷಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಲ್ಲಿಯ ಹಳೇಹುಬ್ಬಳ್ಳಿಯ ಜುಬೇರಲಿ ಸವಣೂರ ಅವರ ₹45 ಸಾವಿರ ಮೌಲ್ಯದ ಲ್ಯಾಪ್ಟಾಪ್ ಇದ್ದ ಬ್ಯಾಗ್ ಕಳವು ಆಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>