<p><strong>ಹುಬ್ಬಳ್ಳಿ</strong>: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಶವವನ್ನು ನಗರದ ದೇವಾಂಗಪೇಟೆಯ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.</p>.<p>ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಾಬುಸಾಬ ಅಲ್ಲಾಭಕ್ಷ ಶಿವಳ್ಳಿ ಕೊಲೆಯಾದವರು. ದೇವಾಂಗಪೇಟೆ ನಿವಾಸಿಯಾದ ಅವರು, ಮಂಗಳವಾರ ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಅವರು, ರಾತ್ರಿ ಹೊರಗೆ ಹೋದವರು ಮನೆಗೆ ಬಂದಿರಲಿಲ್ಲ.</p>.<p>ಬೆಳಿಗ್ಗೆ 7ರ ಹೊತ್ತಿಗೆ ಚರಂಡಿಯಲ್ಲಿ ರಕ್ತಸಿಕ್ತ ಮೃತದೇಹವನ್ನು ಕಂಡ ಸ್ಥಳೀಯರು ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಯಿತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಿಚಿತರೇ ಕೊಲೆ ಮಾಡಿರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಆರೋಪಗಳನ್ನು ಬಂಧಿಸಲಾಗುವುದು ಎಂದು ಅಶೋಕನಗರ ಠಾಣೆ ಪೊಲೀಸರು ತಿಳಿಸಿದರು.</p>.<p>ಸ್ಥಳಕ್ಕೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಶವವನ್ನು ನಗರದ ದೇವಾಂಗಪೇಟೆಯ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.</p>.<p>ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಾಬುಸಾಬ ಅಲ್ಲಾಭಕ್ಷ ಶಿವಳ್ಳಿ ಕೊಲೆಯಾದವರು. ದೇವಾಂಗಪೇಟೆ ನಿವಾಸಿಯಾದ ಅವರು, ಮಂಗಳವಾರ ಮಧ್ಯಾಹ್ನ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಅವರು, ರಾತ್ರಿ ಹೊರಗೆ ಹೋದವರು ಮನೆಗೆ ಬಂದಿರಲಿಲ್ಲ.</p>.<p>ಬೆಳಿಗ್ಗೆ 7ರ ಹೊತ್ತಿಗೆ ಚರಂಡಿಯಲ್ಲಿ ರಕ್ತಸಿಕ್ತ ಮೃತದೇಹವನ್ನು ಕಂಡ ಸ್ಥಳೀಯರು ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಯಿತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಿಚಿತರೇ ಕೊಲೆ ಮಾಡಿರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಆರೋಪಗಳನ್ನು ಬಂಧಿಸಲಾಗುವುದು ಎಂದು ಅಶೋಕನಗರ ಠಾಣೆ ಪೊಲೀಸರು ತಿಳಿಸಿದರು.</p>.<p>ಸ್ಥಳಕ್ಕೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>