<p><strong>ಹುಬ್ಬಳ್ಳಿ:</strong> ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಕೇಶ್ವಾಪುರದ ನಿವಾಸಿ, ಬ್ಯಾಂಕ್ ಉದ್ಯೋಗಿ ಪಾರುಶ್ ಗೌರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ₹39.42 ಲಕ್ಷ ವಂಚಿಸಿದ್ಧಾನೆ.</p>.<p>‘ಪಾರುಶ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಆಪ್ಷನ್ ಟ್ರೇಡಿಂಗ್ ಮತ್ತು ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ಹೇಳಿದ್ದಾನೆ. ನಂತರ ಟೆಲಿಗ್ರಾಂ ಆ್ಯಪ್ ಮೂಲಕ ಸಂಪರ್ಕಿಸಿ, ಲಾಭದ ಆಮಿಷವೊಡ್ಡಿ ವಿವಿಧ ಬ್ಯಾಂಕ್ ಖಾತೆಗಳಿಂದ ₹39,42 ಲಕ್ಷ ವರ್ಗಾಯಿಸಿಕೊಂಡು ಲಾಭಾಂಶ ನೀಡದೆ, ಹೂಡಿಕೆ ಮಾಡಿದ ಹಣ ಮರಳಿಸದೆ ವಂಚಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಕರುಗಳ ರಕ್ಷಣೆ; ನಾಲ್ವರ ಬಂಧನ:</strong> </p><p>ತಾಲ್ಲೂಕಿನ ಕುಸುಗಲ್ ಗ್ರಾಮದಿಂದ ಬ್ಯಾಹಟ್ಟಿ ಮಾರ್ಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಕರುಗಳನ್ನು ಗ್ರಾಮೀಣ ಠಾಣೆ ಪೊಲೀಸರು ರಕ್ಷಣೆ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಮಲ್ಲಾಪುರದ ನಿವಾಸಿ ತಸ್ಲೀಮ್ ಮುಲ್ಲಾ, ನದೀಮ್ ಬೇಪಾರಿ, ಖಾಜೇಸಾಬ ಬೇಪಾರಿ, ಶಾರುಖ್ ಬೇಪಾರಿ ಬಂಧಿತರು.</p>.<p>₹ಆರೋಪಿಗಳು 1.47 ಲಕ್ಷದ ಮೌಲ್ಯದ ಜರ್ಸಿ, ಗಿರ್, ಜವಾರಿ, ಎಚ್ಎಫ್ ತಳಿಯ ಕರುಗಳನ್ನು ಮೇವು ಮತ್ತು ನೀರಿನ ವ್ಯವಸ್ಥೆ ಇಲ್ಲದೆ, ಹಿಂಸೆ ಆಗುವಂತಹ ರೀತಿಯಲ್ಲಿ ವಾಹನದಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಕೇಶ್ವಾಪುರದ ನಿವಾಸಿ, ಬ್ಯಾಂಕ್ ಉದ್ಯೋಗಿ ಪಾರುಶ್ ಗೌರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ₹39.42 ಲಕ್ಷ ವಂಚಿಸಿದ್ಧಾನೆ.</p>.<p>‘ಪಾರುಶ್ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಆಪ್ಷನ್ ಟ್ರೇಡಿಂಗ್ ಮತ್ತು ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ಹೇಳಿದ್ದಾನೆ. ನಂತರ ಟೆಲಿಗ್ರಾಂ ಆ್ಯಪ್ ಮೂಲಕ ಸಂಪರ್ಕಿಸಿ, ಲಾಭದ ಆಮಿಷವೊಡ್ಡಿ ವಿವಿಧ ಬ್ಯಾಂಕ್ ಖಾತೆಗಳಿಂದ ₹39,42 ಲಕ್ಷ ವರ್ಗಾಯಿಸಿಕೊಂಡು ಲಾಭಾಂಶ ನೀಡದೆ, ಹೂಡಿಕೆ ಮಾಡಿದ ಹಣ ಮರಳಿಸದೆ ವಂಚಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಕರುಗಳ ರಕ್ಷಣೆ; ನಾಲ್ವರ ಬಂಧನ:</strong> </p><p>ತಾಲ್ಲೂಕಿನ ಕುಸುಗಲ್ ಗ್ರಾಮದಿಂದ ಬ್ಯಾಹಟ್ಟಿ ಮಾರ್ಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಕರುಗಳನ್ನು ಗ್ರಾಮೀಣ ಠಾಣೆ ಪೊಲೀಸರು ರಕ್ಷಣೆ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಮಲ್ಲಾಪುರದ ನಿವಾಸಿ ತಸ್ಲೀಮ್ ಮುಲ್ಲಾ, ನದೀಮ್ ಬೇಪಾರಿ, ಖಾಜೇಸಾಬ ಬೇಪಾರಿ, ಶಾರುಖ್ ಬೇಪಾರಿ ಬಂಧಿತರು.</p>.<p>₹ಆರೋಪಿಗಳು 1.47 ಲಕ್ಷದ ಮೌಲ್ಯದ ಜರ್ಸಿ, ಗಿರ್, ಜವಾರಿ, ಎಚ್ಎಫ್ ತಳಿಯ ಕರುಗಳನ್ನು ಮೇವು ಮತ್ತು ನೀರಿನ ವ್ಯವಸ್ಥೆ ಇಲ್ಲದೆ, ಹಿಂಸೆ ಆಗುವಂತಹ ರೀತಿಯಲ್ಲಿ ವಾಹನದಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>