ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ‘ಪ್ರತಿಭಾವಂತ ಅಭ್ಯರ್ಥಿಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಮರುಪರೀಕ್ಷೆಗೆ ಮುಂದಾಗಿದ್ದು ಸರಿಯಲ್ಲ. ಅವರು ಏನೇ ಮಾಡಿದರೂ, ನಾವು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟಕ್ಕೂ ಸಿದ್ದರಿದ್ದು, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.