ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಇನ್ಸ್ಪೆಕ್ಟರ್ ಪ್ರಭುಗೌಡ ಪಾಟೀಲ, ‘ಉತ್ತರ ಪ್ರದೇಶ, ಬೆಂಗಳೂರು, ಮಹಾರಾಷ್ಟ್ರ, ದೆಹಲಿಗಳಲ್ಲಿ ಕಾಲ್ ಸೆಂಟರ್ನಲ್ಲಿ ಉದ್ಯೋಗ ಮಾಡುತ್ತಿದ್ದವರು, ನೋಟು ಅಮಾನ್ಯೀಕರಣ ಹಾಗೂ ಆರ್ಥಿಕ ಹಿಂಜರಿತದಿಂದ ಕೆಲಸ ಕಳೆದುಕೊಂಡು ತಮ್ಮ ರಾಜ್ಯಗಳಿಗೆ ಹಿಂದಿರುಗಿದ್ದಾರೆ. ತಾಂತ್ರಿಕವಾಗಿ ಪರಿಣಿತರಿರುವ ಅವರು, ತಮ್ಮ ನಡುವೆ ನಿರಂತರ ಸಂಪರ್ಕ ಇಟ್ಟುಕೊಂಡು, ಅಂತರ್ಜಾಲದ ಮೂಲಕ ವಂಚನೆಯ ಜಾಲ ಬೀಸುತ್ತಿದ್ದಾರೆ’ ಎಂದರು.