ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ: ಕಾರ್ಯಕರ್ತರಿಗೆ ಪ್ರಾತ್ಯಕ್ಷಿಕೆ

Last Updated 1 ಜುಲೈ 2020, 7:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಬುಧವಾರ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ತೋರಿಸಲಾಯಿತು.

ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಎರಡು ದೊಡ್ಡ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದ್ದು, ಒಂದು ಪರದೆಯಲ್ಲಿ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮ, ಇನ್ನೊಂದು ಪರದೆಯಲ್ಲಿ ಝೂಮ್ ಆ್ಯಪ್ ಮೂಲಕ ಕೆಪಿಸಿಸಿಯಿಂದ ಪ್ರಸಾರ ಇರುತ್ತದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಚಾಲನೆ ನೀಡಿದರು. ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT