<p><strong>ಧಾರವಾಡ:</strong> ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರದಲ್ಲಿ ಈಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ವಿಧಾನ ಮಂಡಲದ ಎಸ್ಸಿ–ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ <br>ಹೇಳಿದರು.</p>.<p>ಇನಾಂ ವೀರಾಪುರದಲ್ಲಿ ನಡೆದ ಪ್ರಕರಣದ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಭೆಯಲ್ಲಿ ಮಾತನಾಡಿದರು.</p>.<p>ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಸಬೇಕು. ಪರಿಶಿಷ್ಟ ಸಮುದಾಯದ ಕುಟುಂಬದ ಮೇಲಿನ ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. <br>ಇಂತಹ ಘಟನೆಗಳು ಮರುಕಳಿಸದಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಸೌಹಾರ್ದ ಕಾಪಾಡಲು ಕ್ರಮ ಕೈಗೊಳ್ಳಬೇಕು. ಅಂತರ್ಜಾತಿ ವಿವಾಹಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು <br>ಎಂದರು.</p>.<p>ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತವು ಕೈಗೊಂಡಿರುವ ಕ್ರಮಗಳು, ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ನೆರವಿನ ಕುರಿತು ಮಾಹಿತಿ <br>ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಪ್ರಕರಣದ ಹಿನ್ನೆಲೆ, ತನಿಖೆ, ಆರೋಪಿಗಳ ಬಂಧನ, ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ಭದ್ರತೆ ಕುರಿತು ವಿವರಿಸಿದರು.</p>.<p>ಸಮಿತಿ ಸದಸ್ಯರಾದ ಡಿ.ತಿಮ್ಮಯ್ಯ, ಹೇಮಲತಾ ನಾಯಕ, ಎಫ್.ಎಚ್.ಜಕ್ಕಪ್ಪನವರ, ಕೃಷ್ಣ ನಾಯಕ, ಚಂದ್ರು ಲಮಾಣಿ, ಸಮೃದ್ಧಿ ವಿ.ಮಂಜುನಾಥ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ <br>ಉಪಸ್ಥಿತರಿದ್ದರು.</p>.<p><strong>‘ಮರ್ಯಾದೆಗೇಡು ಹತ್ಯೆ:..</strong></p><p><strong>ಹೀನ ಕೃತ್ಯ’ ಹುಬ್ಬಳ್ಳಿ:</strong> ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಘಟನೆಯು ಹೀನ ಕೃತ್ಯವಾಗಿದ್ದು ಇಂತಹ ಘಟನೆ ಎಲ್ಲಿಯೂ ನಡೆಯಬಾರದು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ವಿಧಾನ ಮಂಡಲದ ಎಸ್ಸಿ–ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಇನಾಂ ವೀರಾಪುರ ಗ್ರಾಮಕ್ಕೆ ಶುಕ್ರವಾರ ಸಮಿತಿಯ ಸದಸ್ಯರೊಂದಿಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾಗಿರುವ ದೊಡ್ಡಮನಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಘಟನೆ ನಡೆದ ಸ್ಥಳ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕುಟುಂಬದ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ವಿವೇಕಾನಂದ ಅವರ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಇನ್ನೂ ಹೆಚ್ಚಿನ ರಕ್ಷಣೆ ನೀಡಬೇಕು. ವಿವೇಕಾನಂದ ಅವರು ವಿದ್ಯಾಭ್ಯಾಸ ನಡೆಸಲು ಮುಕ್ತ ವಾತಾವರಣ ನಿರ್ಮಿಸಿಕೊಡಬೇಕಿದೆ’ ಎಂದರು. ವಿವೇಕಾನಂದ ದೊಡ್ಡಮನಿ ಅವರು ‘ಮುಂದಿನ ದಿನಗಳಲ್ಲಿ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ದೌರ್ಜನ್ಯ ಆಗಬಾರದು. ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರದಲ್ಲಿ ಈಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ವಿಧಾನ ಮಂಡಲದ ಎಸ್ಸಿ–ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ <br>ಹೇಳಿದರು.</p>.<p>ಇನಾಂ ವೀರಾಪುರದಲ್ಲಿ ನಡೆದ ಪ್ರಕರಣದ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಭೆಯಲ್ಲಿ ಮಾತನಾಡಿದರು.</p>.<p>ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಸಬೇಕು. ಪರಿಶಿಷ್ಟ ಸಮುದಾಯದ ಕುಟುಂಬದ ಮೇಲಿನ ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. <br>ಇಂತಹ ಘಟನೆಗಳು ಮರುಕಳಿಸದಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಸೌಹಾರ್ದ ಕಾಪಾಡಲು ಕ್ರಮ ಕೈಗೊಳ್ಳಬೇಕು. ಅಂತರ್ಜಾತಿ ವಿವಾಹಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು <br>ಎಂದರು.</p>.<p>ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತವು ಕೈಗೊಂಡಿರುವ ಕ್ರಮಗಳು, ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ನೆರವಿನ ಕುರಿತು ಮಾಹಿತಿ <br>ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಪ್ರಕರಣದ ಹಿನ್ನೆಲೆ, ತನಿಖೆ, ಆರೋಪಿಗಳ ಬಂಧನ, ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ಭದ್ರತೆ ಕುರಿತು ವಿವರಿಸಿದರು.</p>.<p>ಸಮಿತಿ ಸದಸ್ಯರಾದ ಡಿ.ತಿಮ್ಮಯ್ಯ, ಹೇಮಲತಾ ನಾಯಕ, ಎಫ್.ಎಚ್.ಜಕ್ಕಪ್ಪನವರ, ಕೃಷ್ಣ ನಾಯಕ, ಚಂದ್ರು ಲಮಾಣಿ, ಸಮೃದ್ಧಿ ವಿ.ಮಂಜುನಾಥ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ <br>ಉಪಸ್ಥಿತರಿದ್ದರು.</p>.<p><strong>‘ಮರ್ಯಾದೆಗೇಡು ಹತ್ಯೆ:..</strong></p><p><strong>ಹೀನ ಕೃತ್ಯ’ ಹುಬ್ಬಳ್ಳಿ:</strong> ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಘಟನೆಯು ಹೀನ ಕೃತ್ಯವಾಗಿದ್ದು ಇಂತಹ ಘಟನೆ ಎಲ್ಲಿಯೂ ನಡೆಯಬಾರದು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ವಿಧಾನ ಮಂಡಲದ ಎಸ್ಸಿ–ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಹೇಳಿದರು. ಇನಾಂ ವೀರಾಪುರ ಗ್ರಾಮಕ್ಕೆ ಶುಕ್ರವಾರ ಸಮಿತಿಯ ಸದಸ್ಯರೊಂದಿಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾಗಿರುವ ದೊಡ್ಡಮನಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಘಟನೆ ನಡೆದ ಸ್ಥಳ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕುಟುಂಬದ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ವಿವೇಕಾನಂದ ಅವರ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಇನ್ನೂ ಹೆಚ್ಚಿನ ರಕ್ಷಣೆ ನೀಡಬೇಕು. ವಿವೇಕಾನಂದ ಅವರು ವಿದ್ಯಾಭ್ಯಾಸ ನಡೆಸಲು ಮುಕ್ತ ವಾತಾವರಣ ನಿರ್ಮಿಸಿಕೊಡಬೇಕಿದೆ’ ಎಂದರು. ವಿವೇಕಾನಂದ ದೊಡ್ಡಮನಿ ಅವರು ‘ಮುಂದಿನ ದಿನಗಳಲ್ಲಿ ಯಾವ ಹೆಣ್ಣುಮಕ್ಕಳಿಗೂ ಈ ರೀತಿ ದೌರ್ಜನ್ಯ ಆಗಬಾರದು. ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>