<p><strong>ಹುಬ್ಬಳ್ಳಿ: </strong>ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಾರ್ಷಿಕ ಸಾಮಾನ್ಯ ಸಭೆ ಫೆ. 15 ಹಾಗೂ 16ರಂದು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಹಲವು ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಸಮಿತಿಯು ಕೆಲ ಬಣಗಳಾಗಿತ್ತು. ಕೆಲ ವ್ಯಕ್ತಿಗಳು ಮೂಲ ಸಮಿತಿಯನ್ನೇ ತಮ್ಮದು ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡಿದರು. ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಒಂಬತ್ತು ವರ್ಷಗಳ ಕಾಲ ವಿಚಾರಣೆ ನಡೆದು 2021ರ ಮಾರ್ಚ್ 24ರಂದು ಎನ್.ಗಿರಿಯಪ್ಪ ಮತ್ತು ಎಂ.ಗುರುಮೂರ್ತಿ ಸಮಿತಿಯ ವಾರಸುದಾರರು ನ್ಯಾಯಾಲಯ ಆದೇಶ ನೀಡಿದೆ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ, ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಆಹ್ವಾನಿಸಿ ಸಂಘಟನೆಯನ್ನು 1980ರ ದಶಕದಲ್ಲಿದ್ದ ಪರಿಣಾಮಕಾರಿಯಾಗಿ ಇದ್ದಂತೆ ಈಗಲೂ ಬೆಳೆಸಲಾಗುವುದು’ ಎಂದು ಹೇಳಿದರು.</p>.<p>‘ಸಮಿತಿಯ ಬಣಗಳಲ್ಲಿ ನಾಲ್ಕು ಸಂಘಟನೆಗಳು 2021ರ ನವೆಂಬರ್ನಲ್ಲಿ ಶಿವಮೊಗ್ಗದ ಗಾಜನೂರಿನಲ್ಲಿ ಜರುಗಿದ ಐಕ್ಯತಾ ಸಮಾವೇಶದಲ್ಲಿ ವಿಲೀನವಾದವು. ನಂತರ ವಿವಿಧ ಬಣಗಳ ವಿಲೀನಕ್ಕೆ ಕರೆ ಕೊಡುತ್ತಾ ಸಮಾಲೋಚನಾ ಸಭೆಗಳನ್ನು ಮಾಡುತ್ತಾ ಬರಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಸಂಚಾಲಕ ಮದನ್, ಖಜಾಂಚಿ ಕರಿಯಪ್ಪ ಭದ್ರಾಪುರ, ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಫಕ್ಕೀರಪ್ಪ, ಶಿವಬಸಪ್ಪ ಭದ್ರಾವತಿ, ಶಿವಬಸಪ್ಪ ಭದ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಾರ್ಷಿಕ ಸಾಮಾನ್ಯ ಸಭೆ ಫೆ. 15 ಹಾಗೂ 16ರಂದು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಹಲವು ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಸಮಿತಿಯು ಕೆಲ ಬಣಗಳಾಗಿತ್ತು. ಕೆಲ ವ್ಯಕ್ತಿಗಳು ಮೂಲ ಸಮಿತಿಯನ್ನೇ ತಮ್ಮದು ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡಿದರು. ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಒಂಬತ್ತು ವರ್ಷಗಳ ಕಾಲ ವಿಚಾರಣೆ ನಡೆದು 2021ರ ಮಾರ್ಚ್ 24ರಂದು ಎನ್.ಗಿರಿಯಪ್ಪ ಮತ್ತು ಎಂ.ಗುರುಮೂರ್ತಿ ಸಮಿತಿಯ ವಾರಸುದಾರರು ನ್ಯಾಯಾಲಯ ಆದೇಶ ನೀಡಿದೆ’ ಎಂದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ, ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಆಹ್ವಾನಿಸಿ ಸಂಘಟನೆಯನ್ನು 1980ರ ದಶಕದಲ್ಲಿದ್ದ ಪರಿಣಾಮಕಾರಿಯಾಗಿ ಇದ್ದಂತೆ ಈಗಲೂ ಬೆಳೆಸಲಾಗುವುದು’ ಎಂದು ಹೇಳಿದರು.</p>.<p>‘ಸಮಿತಿಯ ಬಣಗಳಲ್ಲಿ ನಾಲ್ಕು ಸಂಘಟನೆಗಳು 2021ರ ನವೆಂಬರ್ನಲ್ಲಿ ಶಿವಮೊಗ್ಗದ ಗಾಜನೂರಿನಲ್ಲಿ ಜರುಗಿದ ಐಕ್ಯತಾ ಸಮಾವೇಶದಲ್ಲಿ ವಿಲೀನವಾದವು. ನಂತರ ವಿವಿಧ ಬಣಗಳ ವಿಲೀನಕ್ಕೆ ಕರೆ ಕೊಡುತ್ತಾ ಸಮಾಲೋಚನಾ ಸಭೆಗಳನ್ನು ಮಾಡುತ್ತಾ ಬರಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಸಂಚಾಲಕ ಮದನ್, ಖಜಾಂಚಿ ಕರಿಯಪ್ಪ ಭದ್ರಾಪುರ, ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಫಕ್ಕೀರಪ್ಪ, ಶಿವಬಸಪ್ಪ ಭದ್ರಾವತಿ, ಶಿವಬಸಪ್ಪ ಭದ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>