<p><strong>ಧಾರವಾಡ:</strong> ನಗರದ ಕಮಲಾಪುರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ (ನಂಬರ್4) ಮೂರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರ ಅಪಹರಿಸಿ ಕರೆದೊಯ್ದಿದ್ದ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪೊಲೀಸರಿಗೆ ಸಿಕ್ಕಿಬಿದ್ದಿದ್ಧಾನೆ. ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. </p>.<p>ಆಸ್ಮಿನಗರದ ಅಬ್ದುಲ್ ಕರೀಂ ಮೇಸ್ತಿ (50) ಸಿಕ್ಕಿಬಿದ್ದ ಆರೋಪಿ. ತನ್ವೀರ್ ದೊಡ್ಡಮನಿ ಮತ್ತುಲಕ್ಷ್ಮೀ ಕರೆಪ್ಪನವರ ಅವರನ್ನು ರಕ್ಷಿಸಲಾಗಿದೆ. </p>.<p>‘ಅಬ್ದುಲ್ ಕರೀಂ ಮಧ್ಯಾಹ್ನ ಶಾಲೆಯಿಂದ ವಿದ್ಯಾರ್ಥಿಗಳನ್ನು ಅಪಹರಿಸಿದ್ದ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಸಿ.ಸಿ ಟಿವಿ ಕ್ಯಾಮೆರಾದ ಫೋಟೆಜ್ಗಳನ್ನು ನೀಡಿದೆವು’ ಎಂದು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ವಿ.ಜಿ.ಕಂಬಿ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಆರೋಪಿಯ ಬೈಕ್ನಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ದಾಂಡೇಲಿ ಸಮೀಪ ‘ಸ್ಕಿಡ್" ಆಗಿ ಬಿದ್ದಿದ್ದಾರೆ. ಆರೋಪಿ ತಲೆ ಮತ್ತು ಕೈಗೆ ಗಾಯವಾಗಿದ್ದು, ಜೋಯಿಡಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ರಕ್ಷಿಸಲಾಗಿದೆ. ಉಳವಿ ಜಾತ್ರೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದೆ ಎಂದು ಆರೋಪಿ ಹೇಳಿದ್ಧಾನೆ’ ಎಂದು ಪೊಲೀಸರು ತಿಳಿಸಿದರು. </p>.<p>ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕಮಲಾಪುರದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ (ನಂಬರ್4) ಮೂರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರ ಅಪಹರಿಸಿ ಕರೆದೊಯ್ದಿದ್ದ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪೊಲೀಸರಿಗೆ ಸಿಕ್ಕಿಬಿದ್ದಿದ್ಧಾನೆ. ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. </p>.<p>ಆಸ್ಮಿನಗರದ ಅಬ್ದುಲ್ ಕರೀಂ ಮೇಸ್ತಿ (50) ಸಿಕ್ಕಿಬಿದ್ದ ಆರೋಪಿ. ತನ್ವೀರ್ ದೊಡ್ಡಮನಿ ಮತ್ತುಲಕ್ಷ್ಮೀ ಕರೆಪ್ಪನವರ ಅವರನ್ನು ರಕ್ಷಿಸಲಾಗಿದೆ. </p>.<p>‘ಅಬ್ದುಲ್ ಕರೀಂ ಮಧ್ಯಾಹ್ನ ಶಾಲೆಯಿಂದ ವಿದ್ಯಾರ್ಥಿಗಳನ್ನು ಅಪಹರಿಸಿದ್ದ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಸಿ.ಸಿ ಟಿವಿ ಕ್ಯಾಮೆರಾದ ಫೋಟೆಜ್ಗಳನ್ನು ನೀಡಿದೆವು’ ಎಂದು ಶಾಲೆಯ ಪ್ರಭಾರ ಮುಖ್ಯಶಿಕ್ಷಕ ವಿ.ಜಿ.ಕಂಬಿ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಆರೋಪಿಯ ಬೈಕ್ನಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ದಾಂಡೇಲಿ ಸಮೀಪ ‘ಸ್ಕಿಡ್" ಆಗಿ ಬಿದ್ದಿದ್ದಾರೆ. ಆರೋಪಿ ತಲೆ ಮತ್ತು ಕೈಗೆ ಗಾಯವಾಗಿದ್ದು, ಜೋಯಿಡಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ರಕ್ಷಿಸಲಾಗಿದೆ. ಉಳವಿ ಜಾತ್ರೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದೆ ಎಂದು ಆರೋಪಿ ಹೇಳಿದ್ಧಾನೆ’ ಎಂದು ಪೊಲೀಸರು ತಿಳಿಸಿದರು. </p>.<p>ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>