ರೈತರ ಹೋರಾಟ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಅಡಳಿತಕ್ಕೆ ಏಳು ವರ್ಷವಾದ ಕಾರಣದಿಂದ ಸಂಯುಕ್ತ ಕಿಸಾನ್ ಮೋರ್ಚಾ ಮೇರೆಗೆ ಕರಾಳ ದಿನ ಆಚರಿಸಲಾಗಿದೆ. ವಾಹನಗಳ ಮೇಲೆ ಕಪ್ಪು ಬಾವುಟ ಹಾರಿಸುವುದು, ಕಪ್ಪು ಪಟ್ಟಿ, ಕಪ್ಪು ಮಾಸ್ಕ್, ಕಪ್ಪು ಬಟ್ಟೆ ಧರಿಸುವ ಮೂಲಕ ಹೋರಾಟ ಸಕ್ರಿಯವಾಗಿ ಇರುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಹೇಳಿದರು.