ಹುಬ್ಬಳ್ಳಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜ್ಯದಲ್ಲಿ ಅಧಿಕಾರಿಗಳು, ಸಚಿವರು ಬರ ನಿರ್ವಹಣಾ ಕೆಲಸ ಮಾಡಲು ಆಗದ ಸ್ಥಿತಿ ಇದೆ. ಎರಡು ತಿಂಗಳಿಂದ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತವಾಗಿದೆ. ಕಾರಣ, ಚುನಾವಣಾ ಆಯೋಗವು ನೀತಿ ಸಂಹಿತೆ ಸಡಿಲಿಸುವ ಮೂಲಕ ಸರ್ಕಾರಕ್ಕೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು.