‘ಲೋಕಸಭಾ ಚುನಾವಣೆಯ ಮೈಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಉಳಿಯುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎಚ್ಎಂಟಿ (ಹಾಸನ, ಮಂಡ್ಯ, ತುಮಕೂರು) ಕ್ಷೇತ್ರದಲ್ಲಿ ನಾವು ಗೆಲ್ಲದಿದ್ದರೆ ಸರ್ಕಾರ ಇರುವುದು ಅನುಮಾನ ಎಂದು ದೇವೇಗೌಡರು ಹೇಳಿದ್ದಾರೆ. ಆದ್ದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ನಾವು ಏನೂ ಪ್ರಯತ್ನ ಮಾಡುವುದಿಲ್ಲ. ಅವರ ಕಚ್ಚಾಟದಿಂದಲೇ ಸರ್ಕಾರ ಪತನವಾಗುತ್ತದೆ’ ಎಂದರು.