<p><strong>ಹುಬ್ಬಳ್ಳಿ</strong>: ನಿವೇಶನಕ್ಕಾಗಿ ಧಾರವಾಡ ಸಮೀಪದ ಸತ್ತೂರಿನಲ್ಲಿ 227 ಎಕರೆ ಜಾಗ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆಗೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸಿದ್ದರಿಂದ ಹುಬ್ಬಳ್ಳಿ–ಧಾರವಾಡ ಪ್ರಾಧಿಕಾರ ಈ ಯೋಜನೆ ಕೈಬಿಟ್ಟಿದೆ.</p>.<p>ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸಭೆಯಲ್ಲಿ ಸರ್ವಸಮ್ಮತದಿಂದ ಈ ತೀರ್ಮಾನಕ್ಕೆ ಬರಲಾಯಿತು.</p>.<p>ಸತ್ತೂರಿನಲ್ಲಿ ಭೂಮಿ ವಶಪಡಿಸಿಕೊಳ್ಳಲು ಹುಡಾ 2016ರಿಂದಲೇ ರೈತರ ಜೊತೆ ನಿರಂತರ ಮಾತುಕತೆಯಲ್ಲಿ ತೊಡಗಿತ್ತು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತ ಬಂದಿದ್ದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದಾಗ ಇನ್ನೊಂದು ಬಾರಿ ರೈತರೊಂದಿಗೆ ಚರ್ಚಿಸಿ ಹುಡಾಕ್ಕೆ ಶೇ 60 ಹಾಗೂ ಭೂಮಿ ಕೊಡುವ ರೈತರಿಗೆ ಶೇ 40ರ ಲೆಕ್ಕಾಚಾರದಲ್ಲಿ ಹಂಚಿಕೆಗೆ ಮನವೊಲಿಸುವಂತೆ ಸೂಚಿಸಿತ್ತು.</p>.<p>ಇದಕ್ಕೂ ರೈತರು ಒಪ್ಪಿರಲಿಲ್ಲ. ಅಷ್ಟೇ ಅಲ್ಲ; ಆರಂಭದ ದಿನಗಳಲ್ಲಿದ್ದ ವಿರೋಧವನ್ನು ಈಗಲೂ ಗಟ್ಟಿಯಾಗಿಯೇ ಉಳಿಸಿಕೊಂಡು ಬಂದಿದ್ದರು. ಹೀಗಾಗಿ ಸತ್ತೂರಿನಲ್ಲಿ ನಿವೇಶನಗಳ ನಿರ್ಮಾಣದ ಯೋಜನೆಯಿಂದ ಹುಡಾ ಹಿಂದೆ ಸರಿದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ‘ರೈತರು ವಿರೋಧದಿಂದಾಗಿ ಯೋಜನೆ ಕೈಬಿಟ್ಟಿದ್ದೆವೆ. ಸರ್ಕಾರಕ್ಕೆ ತಿಳಿಸಲಾಗುವುದು’ ಎಂದರು.</p>.<p>ಕೆರೆ ಅಭಿವೃದ್ಧಿ ಯೋಜನೆ: ಅವಳಿ ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಕೆರೆಗಳನ್ನು ಅಭಿವೃದ್ಧಿಪಡಿಸಲು ಹುಡಾದಿಂದ ಪ್ರತಿ ಕ್ಷೇತ್ರಕ್ಕೆ ತಲಾ ₹4 ಕೋಟಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಹುಬ್ಬಳ್ಳಿಯ ಸಂತೋಷ ನಗರ, ನಾಗಶೆಟ್ಟಿಕೊಪ್ಪ, ಕೆಂಪಗೆರೆ ಧಾರವಾಡದ ಸಾಧನಕೇರಿ ಮತ್ತು ಕೆಲಗೇರಿ ಕೆರೆಗಳ ಅಭಿವೃದ್ಧಿಗೆ ಆಯಾ ಕ್ಷೇತ್ರಗಳ ಜನಪ್ರತಿನಿಧಿಗಳು ಶಿಫಾರಸು ಮಾಡಿದ್ದಾರೆ. ಕೆಲ ದಿನಗಳಲ್ಲಿ ಡಿಪಿಆರ್ ಸಿದ್ಧಪಡಿಸಿ ಎಲ್ಲ ಪ್ರಮುಖ ಕೆರೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಕಲಬುರ್ಗಿ ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಹುಡಾ ಸದಸ್ಯರಾದ ಸುನೀಲ ಮೋರೆ, ಚಂದ್ರಶೇಖರ ಗೋಕಾಕ, ಮೀನಾಕ್ಷಿ ಒಂಟಮೂರಿ, ಆಯುಕ್ತ ಎನ್.ಎಚ್. ಕುಮ್ಮಣ್ಣನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನಿವೇಶನಕ್ಕಾಗಿ ಧಾರವಾಡ ಸಮೀಪದ ಸತ್ತೂರಿನಲ್ಲಿ 227 ಎಕರೆ ಜಾಗ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆಗೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸಿದ್ದರಿಂದ ಹುಬ್ಬಳ್ಳಿ–ಧಾರವಾಡ ಪ್ರಾಧಿಕಾರ ಈ ಯೋಜನೆ ಕೈಬಿಟ್ಟಿದೆ.</p>.<p>ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸಭೆಯಲ್ಲಿ ಸರ್ವಸಮ್ಮತದಿಂದ ಈ ತೀರ್ಮಾನಕ್ಕೆ ಬರಲಾಯಿತು.</p>.<p>ಸತ್ತೂರಿನಲ್ಲಿ ಭೂಮಿ ವಶಪಡಿಸಿಕೊಳ್ಳಲು ಹುಡಾ 2016ರಿಂದಲೇ ರೈತರ ಜೊತೆ ನಿರಂತರ ಮಾತುಕತೆಯಲ್ಲಿ ತೊಡಗಿತ್ತು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತ ಬಂದಿದ್ದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದಾಗ ಇನ್ನೊಂದು ಬಾರಿ ರೈತರೊಂದಿಗೆ ಚರ್ಚಿಸಿ ಹುಡಾಕ್ಕೆ ಶೇ 60 ಹಾಗೂ ಭೂಮಿ ಕೊಡುವ ರೈತರಿಗೆ ಶೇ 40ರ ಲೆಕ್ಕಾಚಾರದಲ್ಲಿ ಹಂಚಿಕೆಗೆ ಮನವೊಲಿಸುವಂತೆ ಸೂಚಿಸಿತ್ತು.</p>.<p>ಇದಕ್ಕೂ ರೈತರು ಒಪ್ಪಿರಲಿಲ್ಲ. ಅಷ್ಟೇ ಅಲ್ಲ; ಆರಂಭದ ದಿನಗಳಲ್ಲಿದ್ದ ವಿರೋಧವನ್ನು ಈಗಲೂ ಗಟ್ಟಿಯಾಗಿಯೇ ಉಳಿಸಿಕೊಂಡು ಬಂದಿದ್ದರು. ಹೀಗಾಗಿ ಸತ್ತೂರಿನಲ್ಲಿ ನಿವೇಶನಗಳ ನಿರ್ಮಾಣದ ಯೋಜನೆಯಿಂದ ಹುಡಾ ಹಿಂದೆ ಸರಿದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ‘ರೈತರು ವಿರೋಧದಿಂದಾಗಿ ಯೋಜನೆ ಕೈಬಿಟ್ಟಿದ್ದೆವೆ. ಸರ್ಕಾರಕ್ಕೆ ತಿಳಿಸಲಾಗುವುದು’ ಎಂದರು.</p>.<p>ಕೆರೆ ಅಭಿವೃದ್ಧಿ ಯೋಜನೆ: ಅವಳಿ ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಕೆರೆಗಳನ್ನು ಅಭಿವೃದ್ಧಿಪಡಿಸಲು ಹುಡಾದಿಂದ ಪ್ರತಿ ಕ್ಷೇತ್ರಕ್ಕೆ ತಲಾ ₹4 ಕೋಟಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಹುಬ್ಬಳ್ಳಿಯ ಸಂತೋಷ ನಗರ, ನಾಗಶೆಟ್ಟಿಕೊಪ್ಪ, ಕೆಂಪಗೆರೆ ಧಾರವಾಡದ ಸಾಧನಕೇರಿ ಮತ್ತು ಕೆಲಗೇರಿ ಕೆರೆಗಳ ಅಭಿವೃದ್ಧಿಗೆ ಆಯಾ ಕ್ಷೇತ್ರಗಳ ಜನಪ್ರತಿನಿಧಿಗಳು ಶಿಫಾರಸು ಮಾಡಿದ್ದಾರೆ. ಕೆಲ ದಿನಗಳಲ್ಲಿ ಡಿಪಿಆರ್ ಸಿದ್ಧಪಡಿಸಿ ಎಲ್ಲ ಪ್ರಮುಖ ಕೆರೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಕಲಬುರ್ಗಿ ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಹುಡಾ ಸದಸ್ಯರಾದ ಸುನೀಲ ಮೋರೆ, ಚಂದ್ರಶೇಖರ ಗೋಕಾಕ, ಮೀನಾಕ್ಷಿ ಒಂಟಮೂರಿ, ಆಯುಕ್ತ ಎನ್.ಎಚ್. ಕುಮ್ಮಣ್ಣನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>