<p><strong>ಧಾರವಾಡ:</strong> ‘ಪದವಿ ಹಂತದಲ್ಲಿ ಕೃತಕ ಬುದ್ಧಿಮತ್ತೆ(ಎ.ಐ) ವಿಷಯವನ್ನು ಪಠ್ಯದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಕಲಿಕೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಸಮಕಾಲೀನ ಅಗತ್ಯಗಳಿಗೆ ಶಿಕ್ಷಣ ಕ್ಷೇತ್ರ ಸ್ಪಂದಿಸಬೇಕಿದೆ’ ಎಂದು ಕರ್ನಾಟಕ ವಿ.ವಿ ಕುಲಪತಿ ಪ್ರೊ.ಎ.ಎಂ.ಖಾನ್ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜು ಇಂಗ್ಲಿಷ್ ಶಿಕ್ಷಕರ ಸಂಘದ ವತಿಯಿಂದ ಪ್ರೊ. ಚಂದ್ರಶೇಖರ ಕಂಬಾರ ಸಭಾಂಗಣದಲ್ಲಿ ಬುಧವಾರ ನಡೆದ ‘ನಮಗೆ ಯಾವ ರೀತಿಯ ಪಠ್ಯ ಬೇಕು?’ ವಿಷಯ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಭಾರತೀಯ ಸಂಸ್ಕೃತಿಯನ್ನು ಮನದಟ್ಟು ಮಾಡುವ, ಮೌಲ್ಯಗಳನ್ನು ಜಾಗೃತಗೊಳಿಸುವ ಪಠ್ಯ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ವಿಷಯದ ಆಯ್ಕೆಯನ್ನು ಮುಕ್ತವಾಗಿಸಲು ಚಿಂತನೆ ನಡೆದಿದೆ’ ಎಂದರು</p>.<p>ಪರೀಕ್ಷಾಂಗ ಕುಲಸಚಿವ ಪ್ರೊ. ಎನ್.ವೈ. ಮಟ್ಟಿಹಾಳ ಮಾತನಾಡಿ, ‘ಉದ್ಯೋಗಾವಕಾಶ ಕಲ್ಪಿಸುವ, ಕೌಶಲವನ್ನು ಹೆಚ್ಚಿಸುವ, ಪರಿಸರದ ಕುರಿತು ಜಾಗೃತಿ ಮೂಡಿಸುವ ಪಠ್ಯ ರಚನೆ ಮಾಡಬೇಕು. ಈ ಕಾರ್ಯಾಗಾರ ಚರ್ಚೆಯನ್ನು ಪ್ರಸಾರಾಂಗದ ವತಿಯಿಂದ ಪುಸ್ತಕ ರೂಪದಲ್ಲಿ ಪ್ರಕಟಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ವಿಮರ್ಶಕ ಪ್ರೊ. ರಾಜೇಂದ್ರ ಚೆನ್ನಿ, ರಾಜ್ಯ ಪಠ್ಯ ಪುನರ್ರಚನಾ ಸಮಿತಿಯ ಅಧ್ಯಕ್ಷ ಎಂ.ಜಿ.ಹೆಗಡೆ ಕುಮಟಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಪದವಿ ಹಂತದಲ್ಲಿ ಕೃತಕ ಬುದ್ಧಿಮತ್ತೆ(ಎ.ಐ) ವಿಷಯವನ್ನು ಪಠ್ಯದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಕಲಿಕೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಸಮಕಾಲೀನ ಅಗತ್ಯಗಳಿಗೆ ಶಿಕ್ಷಣ ಕ್ಷೇತ್ರ ಸ್ಪಂದಿಸಬೇಕಿದೆ’ ಎಂದು ಕರ್ನಾಟಕ ವಿ.ವಿ ಕುಲಪತಿ ಪ್ರೊ.ಎ.ಎಂ.ಖಾನ್ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜು ಇಂಗ್ಲಿಷ್ ಶಿಕ್ಷಕರ ಸಂಘದ ವತಿಯಿಂದ ಪ್ರೊ. ಚಂದ್ರಶೇಖರ ಕಂಬಾರ ಸಭಾಂಗಣದಲ್ಲಿ ಬುಧವಾರ ನಡೆದ ‘ನಮಗೆ ಯಾವ ರೀತಿಯ ಪಠ್ಯ ಬೇಕು?’ ವಿಷಯ ಕುರಿತ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಭಾರತೀಯ ಸಂಸ್ಕೃತಿಯನ್ನು ಮನದಟ್ಟು ಮಾಡುವ, ಮೌಲ್ಯಗಳನ್ನು ಜಾಗೃತಗೊಳಿಸುವ ಪಠ್ಯ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ವಿಷಯದ ಆಯ್ಕೆಯನ್ನು ಮುಕ್ತವಾಗಿಸಲು ಚಿಂತನೆ ನಡೆದಿದೆ’ ಎಂದರು</p>.<p>ಪರೀಕ್ಷಾಂಗ ಕುಲಸಚಿವ ಪ್ರೊ. ಎನ್.ವೈ. ಮಟ್ಟಿಹಾಳ ಮಾತನಾಡಿ, ‘ಉದ್ಯೋಗಾವಕಾಶ ಕಲ್ಪಿಸುವ, ಕೌಶಲವನ್ನು ಹೆಚ್ಚಿಸುವ, ಪರಿಸರದ ಕುರಿತು ಜಾಗೃತಿ ಮೂಡಿಸುವ ಪಠ್ಯ ರಚನೆ ಮಾಡಬೇಕು. ಈ ಕಾರ್ಯಾಗಾರ ಚರ್ಚೆಯನ್ನು ಪ್ರಸಾರಾಂಗದ ವತಿಯಿಂದ ಪುಸ್ತಕ ರೂಪದಲ್ಲಿ ಪ್ರಕಟಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ವಿಮರ್ಶಕ ಪ್ರೊ. ರಾಜೇಂದ್ರ ಚೆನ್ನಿ, ರಾಜ್ಯ ಪಠ್ಯ ಪುನರ್ರಚನಾ ಸಮಿತಿಯ ಅಧ್ಯಕ್ಷ ಎಂ.ಜಿ.ಹೆಗಡೆ ಕುಮಟಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>