ಧಾರವಾಡ: ನೇಹಾ ಕೊಲೆ ಖಂಡಿಸಿ ಮತ್ತು ಪ್ರಕರಣದ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಏಪ್ರಿಲ್ 22ರಂದು ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು. ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಂಸ್ಥೆ ಆವರಣದಿಂದ ಮೆರವಣಿಗೆ ಹೊರಟು ಜುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಸ್ವಯಂಪ್ರೇರಿತವಾಗಿ ಅಂಗಡಿ, ಮಳಿಗೆಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಂದ್ ಮಾಡುವುದಾಗಿ ಸಮುದಾಯದವರು ಹೇಳಿದ್ದಾರೆ ಎಂದರು.