ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಾಂತರ ಸಹಜ ಪ್ರಕ್ರಿಯೆ; ದೌರ್ಭಾಗ್ಯವೂ ಹೌದು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Published 27 ಆಗಸ್ಟ್ 2023, 18:17 IST
Last Updated 27 ಆಗಸ್ಟ್ 2023, 18:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರಾಜಕೀಯ ವ್ಯವಸ್ಥೆಯಲ್ಲಿ ಕೆಲ ಜನಪ್ರತಿನಿಧಿಗಳು ಪಕ್ಷಾಂತರ ಮಾಡುವುದು ಸಹಜ ಪ್ರಕ್ರಿಯೆ ಹಾಗೂ ಇದೊಂದು ದೌರ್ಭಾಗ್ಯವೂ ಆಗಿದೆ. ಸದ್ಯದ ಸ್ಥಿತಿಯಲ್ಲಿ ಯಾರೂ ನಮ್ಮ ಪಕ್ಷವನ್ನು ಬಿಟ್ಟು ಹೋಗುತ್ತಿಲ್ಲ’ ಎಂದು ಕೇಂದ್ರ  ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕಿ ಬಾತ್‌‘ ರೇಡಿಯೊ ಕಾರ್ಯಕ್ರಮದ 104ನೇ ಸಂಚಿಕೆಯ ಪ್ರಸಾರ ಕಾರ್ಯಕ್ರಮ ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿ ನಾವು ಕನಿಷ್ಠ 22ರಿಂದ 23 ಸ್ಥಾನಗಳನ್ನು ಗೆಲ್ಲುತ್ತೇವೆ. ಕಾಂಗ್ರೆಸ್‌ ಪಕ್ಷದಿಂದ ಯಾರು ನನ್ನ ವಿರುದ್ಧ ಸ್ಪರ್ಧಿಸುತ್ತಾರೊ ಗೊತ್ತಿಲ್ಲ. ಯಾರಾದರೂ ಒಬ್ಬರು ನನ್ನ ವಿರುದ್ಧ ಸ್ಪರ್ಧಿಸಲೇ ಬೇಕಲ್ಲ’ ಎಂದು ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿರುವುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇಬ್ಬರು ಪ್ರಮುಖರು ಕಾಂಗ್ರೆಸ್‌ ಸೇರುತ್ತಾರೆ: ಲಾಡ್‌

ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌.ಲಾಡ್‌, ‘ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಎಸ್‌.ಐ.ಚಿಕ್ಕನಗೌಡ್ರ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾಹಿತಿ ಇದೆ. ಈವರೆಗೆ ಯಾರೂ ನನ್ನನ್ನು ಸಂರ್ಪಕಿಸಿಲ್ಲ’ ಎಂದು ಪ್ರತಿಕ್ರಿಯಿಸಿದರು.  

ಕಾವೇರಿ-ಸಂಕಷ್ಟ ಸೂತ್ರ ರಚನೆಗೆ ಆಗ್ರಹ
ಹುಬ್ಬಳ್ಳಿ: ‘ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಮ್ಮ ನಿಲುವನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದೇವೆ. 2-3 ದಿನಗಳಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಬಹುದು. ನೀರಿನ ಕೊರತೆ ಇದ್ದಾಗ ಮಳೆ ಕಡಿಮೆಯಾದಾಗ ಸಂಕಷ್ಟ ಸೂತ್ರ ರಚಿಸಬೇಕು ಎನ್ನುವುದು ನಮ್ಮ ಬೇಡಿಕೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT