<p><strong>ಹುಬ್ಬಳ್ಳಿ:</strong> ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು.</p>.<p>‘ಹಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇ 60 ರಷ್ಟು ಬೋಧಕರ ಕೊರತೆ ಇದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2,500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಜಕೀಯ ಕಾರಣಕ್ಕೆ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವ ಕಾರಣ ಅವುಗಳ ಸ್ಥಿತಿ ಶೋಚನೀಯವಾಗಿದೆ. ನಾವು ವಿದೇಶಿ ವಿಶ್ವವಿದ್ಯಾಲಯಗಳ ಮಾದರಿ ಅನುಸರಿಸಲು ಸಾಧ್ಯವಿಲ್ಲ’ ಎಂದರು.</p>.<p>‘ವಿದೇಶಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದ ನಡೆಯುತ್ತವೆ. ಆದರೆ, ಇಲ್ಲಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಬೇಕಿದೆ’ ಎಂದು ಹೇಳಿದರು. </p>
<p><strong>ಹುಬ್ಬಳ್ಳಿ:</strong> ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು.</p>.<p>‘ಹಲವು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇ 60 ರಷ್ಟು ಬೋಧಕರ ಕೊರತೆ ಇದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2,500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>‘ರಾಜಕೀಯ ಕಾರಣಕ್ಕೆ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವ ಕಾರಣ ಅವುಗಳ ಸ್ಥಿತಿ ಶೋಚನೀಯವಾಗಿದೆ. ನಾವು ವಿದೇಶಿ ವಿಶ್ವವಿದ್ಯಾಲಯಗಳ ಮಾದರಿ ಅನುಸರಿಸಲು ಸಾಧ್ಯವಿಲ್ಲ’ ಎಂದರು.</p>.<p>‘ವಿದೇಶಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದಿಂದ ನಡೆಯುತ್ತವೆ. ಆದರೆ, ಇಲ್ಲಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಬೇಕಿದೆ’ ಎಂದು ಹೇಳಿದರು. </p>