<p><strong>ಧಾರವಾಡ:</strong> ‘ಗಿರಿಜನ ಸಮುದಾಯಗಳ ಸಾಂಸ್ಕೃತಿಕ ವೈಭವ, ಪರಂಪರೆ ಬಿಂಬಿಸಲು ಮೇ 24ರಂದು ನವದೆಹಲಿಯಲ್ಲಿ ಜನಜಾತಿ ಸಾಂಸ್ಕೃತಿಕ ಸಮಾಗಮ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಅವರು, ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ಗಿರಿಜನ ಸಮುದಾಯದವರು ಭಾಗವಹಿಸುವರು. ಅಂದು ಮಧ್ಯಾಹ್ನ ನವದೆಹಲಿಯ ಐದು ಭಾಗಗಳಿಂದ ಶೋಭಾಯಾತ್ರೆ ನಡೆಯಲಿದೆ’ ಎಂದರು.</p>.<p>‘ವನವಾಸಿ, ಗ್ರಾಮವಾಸಿ, ನಗರವಾಸಿ ನಾವೆಲ್ಲರೂ ಭಾರತವಾಸಿಗಳು ನಮ್ಮೆಲ್ಲರ ರಕ್ತ ಒಂದೇ’ ಘೋಷವಾಕ್ಯದಡಿ ಈ ಸಮಾವೇಶ ನಡೆಯಲಿದೆ. ಕೆಂಪುಕೋಟೆಯ ಬಳಿ ಸಂಜೆ ಜರುಗುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಷಣ ಮಾಡುವರು’ ಎಂದರು.</p>.<p>‘ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಸ್ಮರಿಸಿ ಗೌರವಿಸುವುದು, ಜನಜಾತಿ ಸಮುದಾಯಗಳ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವುದು, ಸಾಂಸ್ಕೃತಿಕ ವಿನಿಮಯ ಮತ್ತು ಸಂವಾದಕ್ಕಾಗಿ ರಾಷ್ಟ್ರೀಯ ವೇದಿಕೆಯನ್ನು ನಿರ್ಮಿಸುವುದು, ಸಮಕಾಲೀನ ಭಾರತದಲ್ಲಿ ಗಿರಿಜನರ ಜ್ಞಾನ ಪರಂಪರೆಯನ್ನು ಸಾರುವುದು, ನಾಗರಿಕತೆಯ ಗುರುತನ್ನು ಬಲಪಡಿಸುವುದು ಈ ಸಮಾವೇಶದ ಉದ್ದೇಶಗಳಾಗಿವೆ’ ಎಂದು ತಿಳಿಸಿದರು.</p>.<p>ಆಮಿಷಕ್ಕೊಳಗಾಗಿ ಮತಾಂತರಗೊಂಡವರನ್ನು ಮನವೊಲಿಸಿ ಪುನಃ ಅವರ ಧರ್ಮಕ್ಕೆ ಕರೆತರುವ ಕೆಲಸವನ್ನು ಕಾನೂನು ರೀತಿಯಲ್ಲಿ ಮಾಡುತ್ತಿದ್ದೇವೆ ಎಂದರು. ದೊಂಡು ಪಾಟೀಲ, ಶಿವಾಜಿ ಕಡ್ಡೆಪ್ಪನವರ, ರಮೇಶ ಕೆಳಗಿನಮನಿ, ರವೀಂದ್ರ ಯಡಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-128415929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಗಿರಿಜನ ಸಮುದಾಯಗಳ ಸಾಂಸ್ಕೃತಿಕ ವೈಭವ, ಪರಂಪರೆ ಬಿಂಬಿಸಲು ಮೇ 24ರಂದು ನವದೆಹಲಿಯಲ್ಲಿ ಜನಜಾತಿ ಸಾಂಸ್ಕೃತಿಕ ಸಮಾಗಮ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ತಿಳಿಸಿದರು.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಅವರು, ಬಿರ್ಸಾ ಮುಂಡಾ ಅವರ 150ನೇ ಜಯಂತಿ ಅಂಗವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ಗಿರಿಜನ ಸಮುದಾಯದವರು ಭಾಗವಹಿಸುವರು. ಅಂದು ಮಧ್ಯಾಹ್ನ ನವದೆಹಲಿಯ ಐದು ಭಾಗಗಳಿಂದ ಶೋಭಾಯಾತ್ರೆ ನಡೆಯಲಿದೆ’ ಎಂದರು.</p>.<p>‘ವನವಾಸಿ, ಗ್ರಾಮವಾಸಿ, ನಗರವಾಸಿ ನಾವೆಲ್ಲರೂ ಭಾರತವಾಸಿಗಳು ನಮ್ಮೆಲ್ಲರ ರಕ್ತ ಒಂದೇ’ ಘೋಷವಾಕ್ಯದಡಿ ಈ ಸಮಾವೇಶ ನಡೆಯಲಿದೆ. ಕೆಂಪುಕೋಟೆಯ ಬಳಿ ಸಂಜೆ ಜರುಗುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಷಣ ಮಾಡುವರು’ ಎಂದರು.</p>.<p>‘ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಸ್ಮರಿಸಿ ಗೌರವಿಸುವುದು, ಜನಜಾತಿ ಸಮುದಾಯಗಳ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವುದು, ಸಾಂಸ್ಕೃತಿಕ ವಿನಿಮಯ ಮತ್ತು ಸಂವಾದಕ್ಕಾಗಿ ರಾಷ್ಟ್ರೀಯ ವೇದಿಕೆಯನ್ನು ನಿರ್ಮಿಸುವುದು, ಸಮಕಾಲೀನ ಭಾರತದಲ್ಲಿ ಗಿರಿಜನರ ಜ್ಞಾನ ಪರಂಪರೆಯನ್ನು ಸಾರುವುದು, ನಾಗರಿಕತೆಯ ಗುರುತನ್ನು ಬಲಪಡಿಸುವುದು ಈ ಸಮಾವೇಶದ ಉದ್ದೇಶಗಳಾಗಿವೆ’ ಎಂದು ತಿಳಿಸಿದರು.</p>.<p>ಆಮಿಷಕ್ಕೊಳಗಾಗಿ ಮತಾಂತರಗೊಂಡವರನ್ನು ಮನವೊಲಿಸಿ ಪುನಃ ಅವರ ಧರ್ಮಕ್ಕೆ ಕರೆತರುವ ಕೆಲಸವನ್ನು ಕಾನೂನು ರೀತಿಯಲ್ಲಿ ಮಾಡುತ್ತಿದ್ದೇವೆ ಎಂದರು. ದೊಂಡು ಪಾಟೀಲ, ಶಿವಾಜಿ ಕಡ್ಡೆಪ್ಪನವರ, ರಮೇಶ ಕೆಳಗಿನಮನಿ, ರವೀಂದ್ರ ಯಡಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-24-128415929</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>