<p><strong>ಹುಬ್ಬಳ್ಳಿ:</strong> ಬಹುವರ್ಷಗಳ ಬೇಡಿಕೆ ಈಡೇರಿಸಿರುವ ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಕೂಡಲೇ ₹2,000 ಕೋಟಿ ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ರತ್ನಭಾರತ ರೈತ ಸಮಾಜದ ರಾಜ್ಯ ಗೌರವ ಅಧ್ಯಕ್ಷ ಹೇಮನಗೌಡ ಬಸನಗೌಡ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಿಗಮ ಸ್ಥಾಪನೆಗೆ ಎಂ.ಬಿ. ಪಾಟೀಲ ಸೇರಿದಂತೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಈ ಮೂಲಕ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಪಾಟೀಲರು ಚುನಾವಣೆಯ ಸಮಯದಲ್ಲಿ ಮತಕ್ಕಾಗಿ ಇಂಥ ಹೇಳಿಕೆಗಳನ್ನು ನೀಡಲಿ. ಈಗ ಚುನಾವಣೆಯ ಸಮಯವಲ್ಲ, ವಿರೋಧದ ಹೇಳಿಕೆಗಳನ್ನು ನೀಡುವುದು ತರವಲ್ಲ’ ಎಂದರು.</p>.<p>‘ವೀರಶೈವ ಲಿಂಗಾಯತ ಸಮಾಜದಲ್ಲಿ ಅನೇಕ ಉಪಪಂಗಡಗಳಿದ್ದು, ಅವರಲ್ಲಿ ಬಹಳಷ್ಟು ಜನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಪರಿಣಾಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಲು ಸಾಧ್ಯವಾಗುತ್ತಿಲ್ಲ. ನಿಗಮದ ಮೂಲಕ ಸೌಲಭ್ಯಗಳನ್ನು ಒದಗಿಸಿ ನೆರವಾಗಬೇಕು’ ಎಂದರು.</p>.<p>‘ಎರಡು ವರ್ಷಗಳಿಂದ ಮೇಲಿಂದ ಮೇಲೆ ಮಳೆ ಸುರಿದ ಪರಿಣಾಮ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸರ್ಕಾರ ಆದಷ್ಟು ಬೇಗನೆ ಸೂಕ್ತ ಪರಿಹಾರ ನೀಡಬೇಕು. ರೈತರ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ನೆರವಿಗೆ ಬರಬೇಕು’ ಎಂದು ಕೋರಿದರು.</p>.<p>ರೈತ ಸಮಾಜದ ಪ್ರಮುಖರಾದ ವಿ.ಎಫ್. ಪಾಟೀಲ, ಸಿ.ಎಸ್. ಪಾಟೀಲ, ಎನ್.ವಿ. ಸಿದ್ದನಗೌಡ್ರ, ಬಸನಗೌಡ ಹಿರೇಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಬಹುವರ್ಷಗಳ ಬೇಡಿಕೆ ಈಡೇರಿಸಿರುವ ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಕೂಡಲೇ ₹2,000 ಕೋಟಿ ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ರತ್ನಭಾರತ ರೈತ ಸಮಾಜದ ರಾಜ್ಯ ಗೌರವ ಅಧ್ಯಕ್ಷ ಹೇಮನಗೌಡ ಬಸನಗೌಡ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಿಗಮ ಸ್ಥಾಪನೆಗೆ ಎಂ.ಬಿ. ಪಾಟೀಲ ಸೇರಿದಂತೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಈ ಮೂಲಕ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಪಾಟೀಲರು ಚುನಾವಣೆಯ ಸಮಯದಲ್ಲಿ ಮತಕ್ಕಾಗಿ ಇಂಥ ಹೇಳಿಕೆಗಳನ್ನು ನೀಡಲಿ. ಈಗ ಚುನಾವಣೆಯ ಸಮಯವಲ್ಲ, ವಿರೋಧದ ಹೇಳಿಕೆಗಳನ್ನು ನೀಡುವುದು ತರವಲ್ಲ’ ಎಂದರು.</p>.<p>‘ವೀರಶೈವ ಲಿಂಗಾಯತ ಸಮಾಜದಲ್ಲಿ ಅನೇಕ ಉಪಪಂಗಡಗಳಿದ್ದು, ಅವರಲ್ಲಿ ಬಹಳಷ್ಟು ಜನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಪರಿಣಾಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಲು ಸಾಧ್ಯವಾಗುತ್ತಿಲ್ಲ. ನಿಗಮದ ಮೂಲಕ ಸೌಲಭ್ಯಗಳನ್ನು ಒದಗಿಸಿ ನೆರವಾಗಬೇಕು’ ಎಂದರು.</p>.<p>‘ಎರಡು ವರ್ಷಗಳಿಂದ ಮೇಲಿಂದ ಮೇಲೆ ಮಳೆ ಸುರಿದ ಪರಿಣಾಮ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸರ್ಕಾರ ಆದಷ್ಟು ಬೇಗನೆ ಸೂಕ್ತ ಪರಿಹಾರ ನೀಡಬೇಕು. ರೈತರ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ನೆರವಿಗೆ ಬರಬೇಕು’ ಎಂದು ಕೋರಿದರು.</p>.<p>ರೈತ ಸಮಾಜದ ಪ್ರಮುಖರಾದ ವಿ.ಎಫ್. ಪಾಟೀಲ, ಸಿ.ಎಸ್. ಪಾಟೀಲ, ಎನ್.ವಿ. ಸಿದ್ದನಗೌಡ್ರ, ಬಸನಗೌಡ ಹಿರೇಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>