<p><strong>ಧಾರವಾಡ:</strong> ‘ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಚಂದ್ರಕಾಂತ ಬೆಲ್ಲದ ಅವರು ಹಾಲಭಾವಿ ಹಾಗೂ ಪಂಡಿತ ಬಸವರಾಜ ರಾಜಗುರು ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೋಶಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಂಜೀವ ಧಮಕನಾಳ ಒತ್ತಾಯಿಸಿದರು. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಲ್ಲದ ಅವರು ಏಕಕಾಲದಲ್ಲಿ ಮೂರು ಟ್ರಸ್ಟ್ಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಎರಡು ಟ್ರಸ್ಟ್ಗಳಿಂದ ಬಿಡುಗಡೆಗೊಳಿಸುವಂತೆ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸದಿದ್ದರೆ. ಈ ನಿಟ್ಟಿನಲ್ಲಿ ಅವರು ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ’ ಎಂದರು.</p>.<p>’ಸಂಘದ ಚುನಾವಣೆ ಡಿಸೆಂಬರ್ನಲ್ಲಿ ನಡೆಯಬೇಕಿತ್ತು. ಅದನ್ನು ಮುಂದೂಡಿದ್ದು ಯಾಕೆ ಎಂಬುದು ತಿಳಿಸಬೇಕು. ಸಂಘದ ಹಣಕಾಸಿನ ಚಟುವಟಿಕೆಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಸಂಘವನ್ನು ಶಾಶ್ವತ ಅನುದಾನಕ್ಕೆ ಒಳಪಡಿಸುವಂತೆ ಎಲ್ಲ ಸಚಿವರಿಗೆ ಶಾಸಕರಿಗೆ ಪತ್ರ ಬರೆದರೂ ಯಾರೂ ಆಸಕ್ತಿ ತೋರಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಯಾಕೆ ಹೋರಾಟ ಆಯೋಜಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<p>ಹನುಮಾಕ್ಷಿ ಗೋಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಚಂದ್ರಕಾಂತ ಬೆಲ್ಲದ ಅವರು ಹಾಲಭಾವಿ ಹಾಗೂ ಪಂಡಿತ ಬಸವರಾಜ ರಾಜಗುರು ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೋಶಾಧ್ಯಕ್ಷ ಸ್ಥಾನದ ಅಭ್ಯರ್ಥಿ ಸಂಜೀವ ಧಮಕನಾಳ ಒತ್ತಾಯಿಸಿದರು. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಲ್ಲದ ಅವರು ಏಕಕಾಲದಲ್ಲಿ ಮೂರು ಟ್ರಸ್ಟ್ಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಎರಡು ಟ್ರಸ್ಟ್ಗಳಿಂದ ಬಿಡುಗಡೆಗೊಳಿಸುವಂತೆ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸದಿದ್ದರೆ. ಈ ನಿಟ್ಟಿನಲ್ಲಿ ಅವರು ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ’ ಎಂದರು.</p>.<p>’ಸಂಘದ ಚುನಾವಣೆ ಡಿಸೆಂಬರ್ನಲ್ಲಿ ನಡೆಯಬೇಕಿತ್ತು. ಅದನ್ನು ಮುಂದೂಡಿದ್ದು ಯಾಕೆ ಎಂಬುದು ತಿಳಿಸಬೇಕು. ಸಂಘದ ಹಣಕಾಸಿನ ಚಟುವಟಿಕೆಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅವರು ಸಂಘವನ್ನು ಶಾಶ್ವತ ಅನುದಾನಕ್ಕೆ ಒಳಪಡಿಸುವಂತೆ ಎಲ್ಲ ಸಚಿವರಿಗೆ ಶಾಸಕರಿಗೆ ಪತ್ರ ಬರೆದರೂ ಯಾರೂ ಆಸಕ್ತಿ ತೋರಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತು ಯಾಕೆ ಹೋರಾಟ ಆಯೋಜಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<p>ಹನುಮಾಕ್ಷಿ ಗೋಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>