<p><strong>ಹುಬ್ಬಳ್ಳಿ</strong>: ಇಲ್ಲಿನ 81ನೇ ವಾರ್ಡ್ನ ರಾಜಕಾಲುವೆಯ ತಡೆಗೋಡೆ ಹಾಳಾಗಿದ್ದು, ಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಅಕ್ಕಾ ಪೌಂಡೇಶನ್ ಟ್ರಸ್ಟ್ ನೇತೃತ್ವದಲ್ಲಿ 81ನೇ ವಾರ್ಡಿನ ನಿವಾಸಿಗಳು ಬುಧವಾರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಎಲ್ ಅಂಡ್ ಟಿ ಕಂಪನಿಯವರು 24X7 ನಳ ಜೋಡಣೆ ಕಾಮಗಾರಿ ನಡೆಸುವ ವೇಳೆ ರಾಜಕಾಲುವೆಯ ತಡೆಗೊಡೆಗೆ ಹಾನಿ ಮಾಡಿರುತ್ತಾರೆ. ಇದರಿಂದಾಗಿ ಜನರ ಸಂಚಾರಕ್ಕೆ ತೊಂದರೆಯಾಗಿದೆ. ಮಹಿಳೆಯರು, ಮಕ್ಕಳು ಭಯದಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ತಡೆಗೋಡೆ ನಿರ್ಮಿಸಿ ಎಂದು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜನಾಲೆಯ ತಡೆಗೊಡೆ ಹಾಳಾಗಿದ್ದರಿಂದ ಕೊಳಚೆ ನೀರು ಹೊರಗೆ ಹರಿಯುತ್ತಿದೆ. ಇದರಲ್ಲಿಯೇ ಜನರು ಸಂಚರಿಸುತ್ತಿದ್ದಾರೆ. ರೋಗ ಹರಡುವ ಸಾಧ್ಯತೆಯೂ ಇರುತ್ತದೆ. ಅಧಿಕಾರಿಗಳು ತಡೆಗೊಡೆ ನಿರ್ಮಿಸಲು ಕ್ರಮಕೈಗೊಳ್ಳಬೇಕು. ನಿರ್ಲಕ್ಷ್ಯಸಿದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದೂ ಎಚ್ಚರಿಸಿದರು.</p>.<p>ಪ್ರತಿಭಟನಾಕಾರರು ಪಾಲಿಕೆ ಕಚೇರಿ ಅಧಿಕಾರಿಗೆ ಹಾಗೂ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹಾಯಕ ಅಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ರೇಷ್ಮಾ, ಮೆಹಬೂಬು ಅಲಿ, ಹುಸೇನ್, ನಜರ್, ರಿಯಾಜ್, ಎಸ್.ವಿ.ನಡುವಿನಮನಿ, ಚಂದ್ರಕಲಾ, ಆರ್.ಪಿ.ಮಾನವಿ, ಪದ್ಮಾ, ರೇಣುಕಾ ಬೀರವಳ್ಳಿ, ಕೆ.ಪ್ರೇಮಾ, ಲಲಿತಾ ಹಾಗೂ ಅಕ್ಕಾ ಪೌಂಡೇಶನ್ ಟ್ರಸ್ಟ್ನ ಪ್ರಮುಖರು, ವಾರ್ಡ್ನ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ 81ನೇ ವಾರ್ಡ್ನ ರಾಜಕಾಲುವೆಯ ತಡೆಗೋಡೆ ಹಾಳಾಗಿದ್ದು, ಗೋಡೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಅಕ್ಕಾ ಪೌಂಡೇಶನ್ ಟ್ರಸ್ಟ್ ನೇತೃತ್ವದಲ್ಲಿ 81ನೇ ವಾರ್ಡಿನ ನಿವಾಸಿಗಳು ಬುಧವಾರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಎಲ್ ಅಂಡ್ ಟಿ ಕಂಪನಿಯವರು 24X7 ನಳ ಜೋಡಣೆ ಕಾಮಗಾರಿ ನಡೆಸುವ ವೇಳೆ ರಾಜಕಾಲುವೆಯ ತಡೆಗೊಡೆಗೆ ಹಾನಿ ಮಾಡಿರುತ್ತಾರೆ. ಇದರಿಂದಾಗಿ ಜನರ ಸಂಚಾರಕ್ಕೆ ತೊಂದರೆಯಾಗಿದೆ. ಮಹಿಳೆಯರು, ಮಕ್ಕಳು ಭಯದಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ತಡೆಗೋಡೆ ನಿರ್ಮಿಸಿ ಎಂದು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ರಾಜನಾಲೆಯ ತಡೆಗೊಡೆ ಹಾಳಾಗಿದ್ದರಿಂದ ಕೊಳಚೆ ನೀರು ಹೊರಗೆ ಹರಿಯುತ್ತಿದೆ. ಇದರಲ್ಲಿಯೇ ಜನರು ಸಂಚರಿಸುತ್ತಿದ್ದಾರೆ. ರೋಗ ಹರಡುವ ಸಾಧ್ಯತೆಯೂ ಇರುತ್ತದೆ. ಅಧಿಕಾರಿಗಳು ತಡೆಗೊಡೆ ನಿರ್ಮಿಸಲು ಕ್ರಮಕೈಗೊಳ್ಳಬೇಕು. ನಿರ್ಲಕ್ಷ್ಯಸಿದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದೂ ಎಚ್ಚರಿಸಿದರು.</p>.<p>ಪ್ರತಿಭಟನಾಕಾರರು ಪಾಲಿಕೆ ಕಚೇರಿ ಅಧಿಕಾರಿಗೆ ಹಾಗೂ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಸಹಾಯಕ ಅಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ರೇಷ್ಮಾ, ಮೆಹಬೂಬು ಅಲಿ, ಹುಸೇನ್, ನಜರ್, ರಿಯಾಜ್, ಎಸ್.ವಿ.ನಡುವಿನಮನಿ, ಚಂದ್ರಕಲಾ, ಆರ್.ಪಿ.ಮಾನವಿ, ಪದ್ಮಾ, ರೇಣುಕಾ ಬೀರವಳ್ಳಿ, ಕೆ.ಪ್ರೇಮಾ, ಲಲಿತಾ ಹಾಗೂ ಅಕ್ಕಾ ಪೌಂಡೇಶನ್ ಟ್ರಸ್ಟ್ನ ಪ್ರಮುಖರು, ವಾರ್ಡ್ನ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>