<p><strong>ಹುಬ್ಬಳ್ಳಿ:</strong> ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಟಿ ಮೀಸಲಾತಿಗಾಗಿ ಒಂದು ದಶಕದಿಂದ ಹೋರಾಟ ನಡೆಸಲಾಗುತ್ತಿದೆ. ಸಮುದಾಯವನ್ನು ಬಳಸಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಸಮುದಾಯದ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದರು.</p>.<p>ಮೀಸಲಾತಿಗೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರಕ್ಕೆ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸಹ ಸಲ್ಲಿಸಲಾಗಿತ್ತು. ಅದು ವಾಪಸ್ ಬಂದ ನಂತರ ಸರ್ಕಾರ ಆ ನಿಟ್ಟಿನಲ್ಲಿ ಮತ್ತೆ ಪ್ರಯತ್ನ ಮಾಡಿಲ್ಲ ಎಂದು ದೂರಿದರು.</p>.<p>ಕುರುಬ ಸಮಾಜಕ್ಕೆ ಆಗುತ್ತಿರುವ ಅನ್ಯಾಯ, ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಎಸ್ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಮತ್ತು ಆರ್ಥಿಕ ಗಣತಿಯ ವರದಿಯನ್ನು ಶೀಘ್ರ ಬಿಡುಗಡೆ ಮಾಡಿ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಿಸಬೇಕು. ಕುರುಬ ಸಮಾಜದ ಅಭಿವೃದ್ಧಿಗಾಗಿ ನಿಗಮ ರಚಿಸಿ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು.</p>.<p>ಕುರುಬರ ಮೂಲ ಪುರುಷ ರೇವಣ ಸಿದ್ಧೇಶ್ವರ ಜಯಂತಿಯನ್ನು ಸರ್ಕಾರ ಆಚರಿಸಬೇಕು. ಅಲ್ಲದೆ, ಜನಪದ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ಆಲಂಬಾಡಿ ಜುಂಜೇಗೌಡ ಅವರ ಹೆಸರು ಉಳಿಸಲು ಯೋಜನೆ ರೂಪಿಸಬೇಕು ಎಂದರು.</p>.<p>ಕುರುಬ ಸಮಾಜದವರ ದೇವಸ್ಥಾನ, ಮಠ, ಆಸ್ತಿಯನ್ನು ಕೆಲವರು ಕಬಳಿಸಿದ್ದು, ಈ ಬಗ್ಗೆ ಪರಿಶೀಲಸಲು ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಹೇಳಿದರು.</p>.<p>ಸಮಾಜದ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಸೋಮಣ್ಣ ಮಲ್ಲೂರ ಮೌರ್ಯ, ಮಂಜುನಾಥ ಗುಡ್ಡನ್ನವರ, ಅರುಣಕುಮಾರ ಹುಲ್ಲನ್ನವರ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಟಿ ಮೀಸಲಾತಿಗಾಗಿ ಒಂದು ದಶಕದಿಂದ ಹೋರಾಟ ನಡೆಸಲಾಗುತ್ತಿದೆ. ಸಮುದಾಯವನ್ನು ಬಳಸಿಕೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಸಮುದಾಯದ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದರು.</p>.<p>ಮೀಸಲಾತಿಗೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರಕ್ಕೆ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸಹ ಸಲ್ಲಿಸಲಾಗಿತ್ತು. ಅದು ವಾಪಸ್ ಬಂದ ನಂತರ ಸರ್ಕಾರ ಆ ನಿಟ್ಟಿನಲ್ಲಿ ಮತ್ತೆ ಪ್ರಯತ್ನ ಮಾಡಿಲ್ಲ ಎಂದು ದೂರಿದರು.</p>.<p>ಕುರುಬ ಸಮಾಜಕ್ಕೆ ಆಗುತ್ತಿರುವ ಅನ್ಯಾಯ, ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಎಸ್ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಾಮಾಜಿಕ ಮತ್ತು ಆರ್ಥಿಕ ಗಣತಿಯ ವರದಿಯನ್ನು ಶೀಘ್ರ ಬಿಡುಗಡೆ ಮಾಡಿ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡಿಸಬೇಕು. ಕುರುಬ ಸಮಾಜದ ಅಭಿವೃದ್ಧಿಗಾಗಿ ನಿಗಮ ರಚಿಸಿ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು.</p>.<p>ಕುರುಬರ ಮೂಲ ಪುರುಷ ರೇವಣ ಸಿದ್ಧೇಶ್ವರ ಜಯಂತಿಯನ್ನು ಸರ್ಕಾರ ಆಚರಿಸಬೇಕು. ಅಲ್ಲದೆ, ಜನಪದ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ಆಲಂಬಾಡಿ ಜುಂಜೇಗೌಡ ಅವರ ಹೆಸರು ಉಳಿಸಲು ಯೋಜನೆ ರೂಪಿಸಬೇಕು ಎಂದರು.</p>.<p>ಕುರುಬ ಸಮಾಜದವರ ದೇವಸ್ಥಾನ, ಮಠ, ಆಸ್ತಿಯನ್ನು ಕೆಲವರು ಕಬಳಿಸಿದ್ದು, ಈ ಬಗ್ಗೆ ಪರಿಶೀಲಸಲು ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಹೇಳಿದರು.</p>.<p>ಸಮಾಜದ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಸೋಮಣ್ಣ ಮಲ್ಲೂರ ಮೌರ್ಯ, ಮಂಜುನಾಥ ಗುಡ್ಡನ್ನವರ, ಅರುಣಕುಮಾರ ಹುಲ್ಲನ್ನವರ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>