<p>ಕೊಲ್ಹಾರ: ‘ಸರ್ಕಾರದ ಉತ್ತಮ ಕೆಲಸಗಳನ್ನು ರೈತರು ಸ್ವಾಗತಿಸಬೇಕು. ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದರೆ ಖಂಡಿಸಬೇಕು. ಆಗ ರೈತರ ಬದುಕು ಹಸನಾಗಲು ಸಾಧ್ಯ’ ಎಂದು ಪ್ರಗತಿಪರ ರೈತ ಸಿದ್ದು ಬಾಲಗೊಂಡ ಹೇಳಿದರು.</p>.<p>ಕೊಲ್ಹಾರ ಪಟ್ಟಣದಲ್ಲಿ ರೈತ ಭಾರತ ಪಕ್ಷದಿಂದ ಗುರುವಾರ ನಡೆದ ಹೆಸ್ಕಾಂ ಸ್ವಚ್ಛತೆ ಅಭಿಯಾನ ಪಾದಯಾತ್ರೆಯಲ್ಲಿ ಮಾತನಾಡಿದರು.</p>.<p>ಪಾದಯಾತ್ರೆಯಲ್ಲಿ ಸಿ.ಎಂ ಗಣಕುಮಾರ ಮಾತನಾಡಿ, ‘ನಮ್ಮ ಭಾಗದಲ್ಲಿ ಸರ್ಕಾರ ನೂತನ ಹೆಸ್ಕಾಂ ಉಪವಿಭಾಗ ಕಚೇರಿ ಶೀಘ್ರದಲ್ಲೇ ಪ್ರಾರಂಭಿಸಿ, ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಕಲ್ಲಿನಾಥ ದೇವರು ಮಾತನಾಡಿ, ‘ರೈತರಿಗೆ ನೀರಿನ ಅಗತ್ಯವಿದೆ. ಸರ್ಕಾರ ಶೀಘ್ರ ಪಂಪ್ಸೆಟ್, ಪಂಪ್ಸೆಟ್ಗೆ ಆರ್ಆರ್ ನಂಬರ್ ನೀಡಬೇಕು. ಹೆಚ್ಚು ಅವಧಿ ವಿದ್ಯುತ್ ಪೂರೈಸಬೇಕು’ ಎಂದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ‘ರೈತರು ಟಿ.ಸಿಗಾಗಿ ಅರ್ಜಿ ಸಲ್ಲಿಸಿದರೆ 48 ಗಂಟೆಯಲ್ಲಿ ಇಲಾಖೆ ತನ್ನ ಕಾರ್ಯ ಮಾಡುತ್ತದೆ. ರೈತರು ಅದರ ಉಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>ಕೊಲ್ಹಾರ ಹೋರಾಟ ಸಮಿತಿ ಅಧ್ಯಕ್ಷ ಈರಣ್ಣ ಕೊಮಾರ ಮಾತನಾಡಿ, ‘ನಮ್ಮ ಪಟ್ಟಣ ತಾಲ್ಲೂಕಾ ಕೇಂದ್ರವಾಗಿ ಹಲವು ವರ್ಷಗಳು ಸಂದಿವೆಯಾದರೂ ತಾಲ್ಲೂಕಿನಲ್ಲಿ ಇನ್ನೂ ಹಲವಾರು ಇಲಾಖೆಗಳು ಪ್ರಾರಂಭಗೊಂಡಿಲ್ಲ. ಸರ್ಕಾರ ಶೀಘ್ರದಲ್ಲಿಯೇ ಪ್ರಾರಂಭಿಸಬೇಕು’ ಎಂದು ಮನವಿ ಮಾಡಿದರು.</p>.<p>ಮುದಕಪ್ಪ ಚೌದ್ರಿ, ಬಸಪ್ಪ ಉಪ್ಪಲದಿನ್ನಿ, ಇಸ್ಮಾಯಿಲ್ ತಹಶೀಲ್ದಾರ್, ಶ್ರೀಶೈಲ ಕಂಬಿ, ಮಲ್ಲಪ್ಪ ಬಾಟಿ, ಇಕ್ಬಾಲ್ ಮುಜಾವರ, ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಲ್ಹಾರ: ‘ಸರ್ಕಾರದ ಉತ್ತಮ ಕೆಲಸಗಳನ್ನು ರೈತರು ಸ್ವಾಗತಿಸಬೇಕು. ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದರೆ ಖಂಡಿಸಬೇಕು. ಆಗ ರೈತರ ಬದುಕು ಹಸನಾಗಲು ಸಾಧ್ಯ’ ಎಂದು ಪ್ರಗತಿಪರ ರೈತ ಸಿದ್ದು ಬಾಲಗೊಂಡ ಹೇಳಿದರು.</p>.<p>ಕೊಲ್ಹಾರ ಪಟ್ಟಣದಲ್ಲಿ ರೈತ ಭಾರತ ಪಕ್ಷದಿಂದ ಗುರುವಾರ ನಡೆದ ಹೆಸ್ಕಾಂ ಸ್ವಚ್ಛತೆ ಅಭಿಯಾನ ಪಾದಯಾತ್ರೆಯಲ್ಲಿ ಮಾತನಾಡಿದರು.</p>.<p>ಪಾದಯಾತ್ರೆಯಲ್ಲಿ ಸಿ.ಎಂ ಗಣಕುಮಾರ ಮಾತನಾಡಿ, ‘ನಮ್ಮ ಭಾಗದಲ್ಲಿ ಸರ್ಕಾರ ನೂತನ ಹೆಸ್ಕಾಂ ಉಪವಿಭಾಗ ಕಚೇರಿ ಶೀಘ್ರದಲ್ಲೇ ಪ್ರಾರಂಭಿಸಿ, ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಸಾನ್ನಿಧ್ಯ ವಹಿಸಿದ್ದ ಕಲ್ಲಿನಾಥ ದೇವರು ಮಾತನಾಡಿ, ‘ರೈತರಿಗೆ ನೀರಿನ ಅಗತ್ಯವಿದೆ. ಸರ್ಕಾರ ಶೀಘ್ರ ಪಂಪ್ಸೆಟ್, ಪಂಪ್ಸೆಟ್ಗೆ ಆರ್ಆರ್ ನಂಬರ್ ನೀಡಬೇಕು. ಹೆಚ್ಚು ಅವಧಿ ವಿದ್ಯುತ್ ಪೂರೈಸಬೇಕು’ ಎಂದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ‘ರೈತರು ಟಿ.ಸಿಗಾಗಿ ಅರ್ಜಿ ಸಲ್ಲಿಸಿದರೆ 48 ಗಂಟೆಯಲ್ಲಿ ಇಲಾಖೆ ತನ್ನ ಕಾರ್ಯ ಮಾಡುತ್ತದೆ. ರೈತರು ಅದರ ಉಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>ಕೊಲ್ಹಾರ ಹೋರಾಟ ಸಮಿತಿ ಅಧ್ಯಕ್ಷ ಈರಣ್ಣ ಕೊಮಾರ ಮಾತನಾಡಿ, ‘ನಮ್ಮ ಪಟ್ಟಣ ತಾಲ್ಲೂಕಾ ಕೇಂದ್ರವಾಗಿ ಹಲವು ವರ್ಷಗಳು ಸಂದಿವೆಯಾದರೂ ತಾಲ್ಲೂಕಿನಲ್ಲಿ ಇನ್ನೂ ಹಲವಾರು ಇಲಾಖೆಗಳು ಪ್ರಾರಂಭಗೊಂಡಿಲ್ಲ. ಸರ್ಕಾರ ಶೀಘ್ರದಲ್ಲಿಯೇ ಪ್ರಾರಂಭಿಸಬೇಕು’ ಎಂದು ಮನವಿ ಮಾಡಿದರು.</p>.<p>ಮುದಕಪ್ಪ ಚೌದ್ರಿ, ಬಸಪ್ಪ ಉಪ್ಪಲದಿನ್ನಿ, ಇಸ್ಮಾಯಿಲ್ ತಹಶೀಲ್ದಾರ್, ಶ್ರೀಶೈಲ ಕಂಬಿ, ಮಲ್ಲಪ್ಪ ಬಾಟಿ, ಇಕ್ಬಾಲ್ ಮುಜಾವರ, ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>