<p><strong>ಹುಬ್ಬಳ್ಳಿ:</strong> ರೈಲ್ವೆ ಖಾಸಗೀಕರಣ ಕೈಬಿಡಬೇಕು ಮತ್ತು ಹುಬ್ಬಳ್ಳಿ –ಬೆಂಗಳೂರು ಮಧ್ಯೆ ಪ್ಯಾಸೆಂಜರ್ ರೈಲುಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ, ರೈಲ್ವೆ ಖಾಸಗೀಕರಣ ವಿರೋಧಿ ಅಭಿಯಾನ ವತಿಯಿಂದ ನಗರದ ರೈಲು ನಿಲ್ದಾಣದ ಎದುರು ಗುರುವಾರ ಪ್ರತಿಭಟನೆ ನಡೆಯಿತು.</p>.<p>ಈ ವೇಳೆ ಮಾತನಾಡಿದ ಅಭಿಯಾನದ ಗಂಗಾಧರ ಬಡಿಗೇರ, ‘ಸಾಮಾನ್ಯ ಜನ ಪ್ರಯಾಣಕ್ಕೆ ರೈಲು ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ, ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣ ಮಾಡಬಾರದು. ಇದರಿಂದ ಈಗ ಸಿಗುತ್ತಿರುವ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಒತ್ತಾಯಿಸಿದರು.</p>.<p>‘ಕೋವಿಡ್ –19 ಬಿಕ್ಕಟ್ಟಿನ ಸಂದರ್ಭದಲ್ಲಿ ರೈಲ್ವೆ ಇಲಾಖೆಯು ನಿತ್ಯ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಸ್ಥಗಿತಗೊಳಿಸಿದೆ. ಪ್ಯಾಸೆಂಜರ್ಗಳನ್ನು ಎಕ್ಸ್ಪ್ರೆಸ್ಗಳನ್ನಾಗಿ ಪರಿವರ್ತಿಸಿದೆ. ಇದರಿಂದಾಗಿ ರೈಲುಗಳು ಸಂಚರಿಸುವ ಮಾರ್ಗದ ಪಟ್ಟಣಗಳಲ್ಲಿ ರೈಲುಗಳು ನಿಲ್ಲುವುದಿಲ್ಲ. ಇದರಿಂದ, ಹಲವರು ಪ್ರಯಾಣದಿಂದ ವಂಚಿತರಾಗುತ್ತಾರೆ’ ಎಂದರು.</p>.<p>ರಮೇಶ ಹೊಸಮನಿ ಮಾತನಾಡಿ, ‘ಸರ್ಕಾರ ರೈಲ್ವೆ ಖಾಸಗೀಕರಣವನ್ನು ಕೈಬಿಡದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಬಳಿಕ ನಿಲ್ದಾಣದ ಮ್ಯಾನೇಜರ್ ಮೂಲಕ, ರೈಲ್ವೆ ಸಚಿವರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹನಮೇಶ ಹುಡೇದ, ಮಹಾಂತೇಶ ಬೀಳೂರು, ಅರುಣ, ಇಮ್ರಾನ್ ಖಾನ್ ರಹೀಂಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರೈಲ್ವೆ ಖಾಸಗೀಕರಣ ಕೈಬಿಡಬೇಕು ಮತ್ತು ಹುಬ್ಬಳ್ಳಿ –ಬೆಂಗಳೂರು ಮಧ್ಯೆ ಪ್ಯಾಸೆಂಜರ್ ರೈಲುಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿ, ರೈಲ್ವೆ ಖಾಸಗೀಕರಣ ವಿರೋಧಿ ಅಭಿಯಾನ ವತಿಯಿಂದ ನಗರದ ರೈಲು ನಿಲ್ದಾಣದ ಎದುರು ಗುರುವಾರ ಪ್ರತಿಭಟನೆ ನಡೆಯಿತು.</p>.<p>ಈ ವೇಳೆ ಮಾತನಾಡಿದ ಅಭಿಯಾನದ ಗಂಗಾಧರ ಬಡಿಗೇರ, ‘ಸಾಮಾನ್ಯ ಜನ ಪ್ರಯಾಣಕ್ಕೆ ರೈಲು ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ, ಯಾವುದೇ ಕಾರಣಕ್ಕೂ ರೈಲ್ವೆಯನ್ನು ಖಾಸಗೀಕರಣ ಮಾಡಬಾರದು. ಇದರಿಂದ ಈಗ ಸಿಗುತ್ತಿರುವ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಒತ್ತಾಯಿಸಿದರು.</p>.<p>‘ಕೋವಿಡ್ –19 ಬಿಕ್ಕಟ್ಟಿನ ಸಂದರ್ಭದಲ್ಲಿ ರೈಲ್ವೆ ಇಲಾಖೆಯು ನಿತ್ಯ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಸ್ಥಗಿತಗೊಳಿಸಿದೆ. ಪ್ಯಾಸೆಂಜರ್ಗಳನ್ನು ಎಕ್ಸ್ಪ್ರೆಸ್ಗಳನ್ನಾಗಿ ಪರಿವರ್ತಿಸಿದೆ. ಇದರಿಂದಾಗಿ ರೈಲುಗಳು ಸಂಚರಿಸುವ ಮಾರ್ಗದ ಪಟ್ಟಣಗಳಲ್ಲಿ ರೈಲುಗಳು ನಿಲ್ಲುವುದಿಲ್ಲ. ಇದರಿಂದ, ಹಲವರು ಪ್ರಯಾಣದಿಂದ ವಂಚಿತರಾಗುತ್ತಾರೆ’ ಎಂದರು.</p>.<p>ರಮೇಶ ಹೊಸಮನಿ ಮಾತನಾಡಿ, ‘ಸರ್ಕಾರ ರೈಲ್ವೆ ಖಾಸಗೀಕರಣವನ್ನು ಕೈಬಿಡದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಬಳಿಕ ನಿಲ್ದಾಣದ ಮ್ಯಾನೇಜರ್ ಮೂಲಕ, ರೈಲ್ವೆ ಸಚಿವರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹನಮೇಶ ಹುಡೇದ, ಮಹಾಂತೇಶ ಬೀಳೂರು, ಅರುಣ, ಇಮ್ರಾನ್ ಖಾನ್ ರಹೀಂಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>