‘ಶಾಲಾ ಹಂತದಲ್ಲಿ ಎಸ್ಡಿಎಂಸಿ ಮತ್ತು ಪಂಚಾಯ್ತಿ, ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲಿ ಎಸ್ಡಿಎಂಸಿ ಸಮನ್ವಯ ವೇದಿಕೆಯು ದಾಖಲಾತಿ ಆಂದೋಲನ, ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರುವ, ಶಾಲೆಗಳ ಮೂಲಸೌಕರ್ಯಕ್ಕೆ ದಾನಿಗಳನ್ನು ಹುಡುಕುವ ಇತ್ಯಾದಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಆದರೆ ಶಿಕ್ಷಕರು ಇದು ತಮಗೆ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.