‘ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿರುವಾಗ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಇದಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುವುದು ಬಿಟ್ಟು, ಅನಗತ್ಯ ಗೊಂದಲ ಸೃಷ್ಟಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ಇಂಥ ಸುಳ್ಳು ಹೇಳಿಕೆಗಳು ಕಾಂಗ್ರೆಸ್ ನಾಯಕರ ಬೌದ್ಧಿಕ ದಿವಾಳಿತನ ತೋರಿಸುತ್ತದೆ. ಹಿಂದೆಯೂ ಬಿ.ಎಸ್. ಯಡಿಯೂರಪ್ಪ ಮತ್ತು ಅನಂತಕುಮಾರ್ ಅವರು ಪಕ್ಷದ ಆಂತರಿಕ ವೇದಿಕೆಯಲ್ಲಿ ಮಾತನಾಡಿದ್ದನ್ನು ಧ್ವನಿಮುದ್ರಣ ಮಾಡಿ ಬಿಡುಗಡೆ ಮಾಡಿ ರಾದ್ದಾಂತ ಮಾಡಿದ್ದು ಇತಿಹಾಸ’ ಎಂದಿದ್ದಾರೆ.