ಅತಿವೃಷ್ಟಿಯಿಂದ ಉತ್ತರ ಕರ್ನಾಟಕದ ಜನತೆ ಬಹಳಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳಿಗಾಗಿ ಹಣ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ. ಆದರೆ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡುತ್ತಿರುವುದು ದುರದೃಷ್ಟಕರ. ಕೂಡಲೇ ಕೇಂದ್ರವು ರಾಜ್ಯದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.