ಶಾಸಕ ಡಿ.ಕೆ. ಶಿವಕುಮಾರ್ ಬಂಧನದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ಎರಡು ದಿನಗಳಿಂದ ಕೆಲವು ಊರುಗಳಲ್ಲಿ ಅಹಿತಕರ ಘಟನೆ ನಡೆಯುವ ಪ್ರಯತ್ನವನ್ನು ನಮ್ಮ ಅಧಿಕಾರಿಗಳು ತಡೆದಿದ್ದಾರೆ. ರಾಮನಗರ, ಕನಕಪುರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯದಾದ್ಯಂತ ಎಚ್ಚರಿಕೆ ವಹಿಸಲಾಗಿದೆ’ ಎಂದರು.