ಪಟ್ಟಣದ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬಾತ, ಫೇಸ್ಬುಕ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಭಯೋತ್ಪಾದಕ ಮತ್ತು ಭಯೋತ್ಪಾದಕರ ಆರಾಧ್ಯ ದೈವ ಎಂದು ಜೂನ್ 6ರಂದು ಪೋಸ್ಟ್ ಹಾಕಿದ್ದ. ಈ ಪೋಸ್ಟ್ನಿಂದ ಯುವಕ ಹಿಂದೂ ಧರ್ಮಕ್ಕೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿರುವ ಮರಾಠಾ ಸಮಾಜದ ಮುಂಖಡರಾದ ವಿಠ್ಠಲ ಗೋ ಚವ್ಹಾಣ, ಶಿವಾಜಿ ಮಹಾರಾಜರ ಅಭಿಮಾನಿಗಳು, ಯುವಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.