ಸುಸ್ಥಿರಾಭಿವೃದ್ಧಿ ತಜ್ಞರಾದ ಡಾ. ಪ್ರಕಾಶ್ ಭಟ್ ಮಾತನಾಡಿ, ‘ಹಿಂದೆ ಮನೆ ಮಾತಾಗಿದ್ದ ಖಾದಿ ಬಟ್ಟೆಗಳು ಕ್ರಮೇಣ ಜನಮಾನಸದಿಂದ ದೂರವಾಗಿದ್ದವು. ಜನರು ಇತ್ತೀಚೆಗೆ ಸುಸ್ಥಿರ ಅಭಿವೃದ್ಧಿಯತ್ತ ತನ್ನ ಚಿತ್ತ ಹರಿಸುತ್ತಿದ್ದಾರೆ. ಇದರಿಂದಾಗಿ, ಖಾದಿ ಸೇರಿದಂತೆ ಇತರ ದೇಸಿ ಉತ್ಪನ್ನಗಳ ಮಾರುಕಟ್ಟೆ ನಿಧಾನವಾಗಿ ತೆರೆದುಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ’ ಎಂದು ಹೇಳಿದರು.