ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಂತೋಷ ಸವಣೂರ ಮಾತನಾಡಿ ’ಚರ್ಮ ಹದ ಕಾಯಕ ನಮ್ಮ ಉಪಜೀವನಕ್ಕೆ ಆಧಾರವಾಗಿದೆ. ಇದನ್ನು ಬಿಟ್ಟು ಬೇರೆ ಕೆಲಸ ಮಾಡಲು ನಮಗೆ ಬರುವುದಿಲ್ಲ. ಆದರೆ ವಾಸನೆ ಬರುತ್ತದೆ ಎಂದು ಅಕ್ಕಪಕ್ಕದ ಬಡಾವಣೆಯವರು ಹೇಳುತ್ತಿರುವ ಕಾರಣ ಸಮಸ್ಯೆಯಾಗುತ್ತಿದೆ. ಆದ್ದರಿಂದ ಸರ್ಕಾರಿ ಜಮೀನು ಮಂಜೂರು ಮಾಡಿಕೊಡಬೇಕು’ ಎಂದು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ತಹಶೀಲ್ದಾರ್ ಕಚೇರಿ ಅಧಿಕಾರಿಗೆ ನೀಡಿದರು. ಮನವಿಯ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಸಲ್ಲಿಸಿದರು.