ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಮಧ್ಯೆಯೂ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿದ್ಯಾನಗರ ಠಾಣೆ ಪೊಲೀಸರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಆರೋಪಿಗಳು ಏ. 14ರಂದು ಶ್ರೀನಗರ ಬಸ್ ನಿಲ್ದಾಣದ ಬಳಿ, ಬಸ್ ಚಾಲಕರನ್ನು ತಡೆದು ಕರ್ತವ್ಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿದ್ದರು. ಈ ಕುರಿತು ಹುಬ್ಬಳ್ಳಿ ನಗರ ಸಾರಿಗೆ 1ನೇ ಘಟಕದ ವ್ಯವಸ್ಥಾಪಕರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.