ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಕರ್ತವ್ಯಕ್ಕೆ ಅಡ್ಡಿ: ಐವರು ಸಾರಿಗೆ ನೌಕರರ ಬಂಧನ

Last Updated 16 ಏಪ್ರಿಲ್ 2021, 13:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಮಧ್ಯೆಯೂ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿದ್ಯಾನಗರ ಠಾಣೆ ಪೊಲೀಸರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ಘಟಕ–1ರ ನೌಕರರಾದ ನಾಗರಾಜ ಬೊಮ್ಮಣ್ಣವರ, ಶಿವಪ್ಪ ದ್ಯಾಮಣ್ಣವರ, ವಿನಾಯಕ ಕಲ್ಲಣ್ಣವರ, ಮಡಿವಾಳಪ್ಪ ಮದ್ದೂರು ಹಾಗೂ ಮಂಜುನಾಥ ಮಡಿವಾಳರ ಬಂಧಿತರು.

ಆರೋಪಿಗಳು ಏ. 14ರಂದು ಶ್ರೀನಗರ ಬಸ್ ನಿಲ್ದಾಣದ ಬಳಿ, ಬಸ್ ಚಾಲಕರನ್ನು ತಡೆದು ಕರ್ತವ್ಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿದ್ದರು. ಈ ಕುರಿತು ಹುಬ್ಬಳ್ಳಿ ನಗರ ಸಾರಿಗೆ 1ನೇ ಘಟಕದ ವ್ಯವಸ್ಥಾಪಕರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT