ಕುಸುಮಾವತಿ ಪರ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಚಾರ
'ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕುಸುಮಾವತಿ ಶಿವಳ್ಳಿ ಅವರಿಗೆ ಅಮೂಲ್ಯ ಮತ ನೀಡಬೇಕು’ ಎಂದು ಕಾಂಗ್ರೆಸ್ ಮುಖಂಡ ಎಂ.ಎಸ್. ಅಕ್ಕಿ ಹೇಳಿದರು.
ಮತಕ್ಷೇತ್ರದ ಚಿಕ್ಕಗುಂಜಳ ಹಿರೇಗುಂಜಳ ಬಾಗವಾಡ ಶೇರೆವಾಡ ಯಲಿವಾಳ ಛಬ್ಬಿ ಕಳಸ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಮತಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು. ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಪಾಲ್ಗೊಂಡರು.