<p>ಹುಬ್ಬಳ್ಳಿ: ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದರ ಜೊತೆಗೆ ಕಲಿಕೋತ್ಸವ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳನ್ನು ಪಾಲ್ಗೊಳಿಸುವ ಮೂಲಕ ಅವರ ಸರ್ವತೋಮುಖ ಪ್ರಗತಿಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ಹುಬ್ಬಳ್ಳಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಹೇಳಿದರು. </p>.<p>ತಾಲ್ಲೂಕಿನ ಕುಸುಗಲ್ಲ ಗ್ರಾಮದ ಸರ್ಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಹುಬ್ಬಳ್ಳಿ ತಾಲ್ಲೂಕು ಮಟ್ಟದ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಆಗಾಗ ಅವರ ಕಲಿಕಾಮಟ್ಟ ಪರಿಶೀಲಿಸಿ, ಬೋಧಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಪೋಷಕರು ಬಳಸಿಕೊಂಡು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಹೇಳಿದರು. </p>.<p>ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆಂಚಪ್ಪ ಶಿವಳ್ಳಿ ಅವರು, ’ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸುವಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿಯೂ ಇದೆ’ ಎಂದರು. </p>.<p>ಕುಸಗಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಸುಂಕದ, ಉಪಾಧ್ಯಕ್ಷೆ ರಾಜಬಿ ಮಿರ್ಜಾನವರ ಹಾಗೂ ಸಂಗಮೇಶ ಬಂಗಾರಿಮಠ ಮಾತನಾಡಿದರು. </p>.<p>ಪ್ರಮುಖರಾದ ಮಹಾಂತೇಶ ಸಂಕರಡ್ಡಿ, ಕಲ್ಲನಗೌಡ ಕೌಜಗೇರಿ, ವಿ.ಎಫ್.ಚುಳಕಿ, ಇಬ್ರಾಹಿಂ ಬೆಟಗೇರಿ, ಎಲ್.ಎಂ.ಕಮಡೊಳ್ಳಿ, ಪಿಡಿಒ ಶಶಿಧರ ಮಂಟೂರ, ಲಲಿತಾ ಹರ್ಲಾಪೂರ, ವಿಜಯಲಕ್ಷ್ಮಿ ಅರ್ಕಸಾಲಿ, ಕಲನಗೌಡ ಹಿತ್ತಲಮನಿ, ಸಂತೋಷ ಲಂಬುಗೊಳ ಭಾಗವಹಿಸಿದ್ದರು. </p>.<p>ಮುಖ್ಯೋಪಾಧ್ಯಾಯ ಶಿವಲೀಲಾ ಕಳಸಣ್ಣವರ ಸ್ವಾಗತಿಸಿದರು. ಸಂಜೀವಕುಮಾರ ಭೂಶೆಟ್ಟಿ ನಿರೂಪಿಸಿದರು. ದುರ್ಗೇಶ ಎಂ. ವಂದಿಸಿದರು. ವಿನೀತ ಭೂಶೆಟ್ಟಿ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವುದರ ಜೊತೆಗೆ ಕಲಿಕೋತ್ಸವ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳನ್ನು ಪಾಲ್ಗೊಳಿಸುವ ಮೂಲಕ ಅವರ ಸರ್ವತೋಮುಖ ಪ್ರಗತಿಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ಹುಬ್ಬಳ್ಳಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಹೇಳಿದರು. </p>.<p>ತಾಲ್ಲೂಕಿನ ಕುಸುಗಲ್ಲ ಗ್ರಾಮದ ಸರ್ಕಾರಿ ಹಿರಿಯ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಹುಬ್ಬಳ್ಳಿ ತಾಲ್ಲೂಕು ಮಟ್ಟದ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. </p>.<p>‘ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಆಗಾಗ ಅವರ ಕಲಿಕಾಮಟ್ಟ ಪರಿಶೀಲಿಸಿ, ಬೋಧಿಸಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಪೋಷಕರು ಬಳಸಿಕೊಂಡು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಹೇಳಿದರು. </p>.<p>ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆಂಚಪ್ಪ ಶಿವಳ್ಳಿ ಅವರು, ’ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸುವಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿಯೂ ಇದೆ’ ಎಂದರು. </p>.<p>ಕುಸಗಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಸುಂಕದ, ಉಪಾಧ್ಯಕ್ಷೆ ರಾಜಬಿ ಮಿರ್ಜಾನವರ ಹಾಗೂ ಸಂಗಮೇಶ ಬಂಗಾರಿಮಠ ಮಾತನಾಡಿದರು. </p>.<p>ಪ್ರಮುಖರಾದ ಮಹಾಂತೇಶ ಸಂಕರಡ್ಡಿ, ಕಲ್ಲನಗೌಡ ಕೌಜಗೇರಿ, ವಿ.ಎಫ್.ಚುಳಕಿ, ಇಬ್ರಾಹಿಂ ಬೆಟಗೇರಿ, ಎಲ್.ಎಂ.ಕಮಡೊಳ್ಳಿ, ಪಿಡಿಒ ಶಶಿಧರ ಮಂಟೂರ, ಲಲಿತಾ ಹರ್ಲಾಪೂರ, ವಿಜಯಲಕ್ಷ್ಮಿ ಅರ್ಕಸಾಲಿ, ಕಲನಗೌಡ ಹಿತ್ತಲಮನಿ, ಸಂತೋಷ ಲಂಬುಗೊಳ ಭಾಗವಹಿಸಿದ್ದರು. </p>.<p>ಮುಖ್ಯೋಪಾಧ್ಯಾಯ ಶಿವಲೀಲಾ ಕಳಸಣ್ಣವರ ಸ್ವಾಗತಿಸಿದರು. ಸಂಜೀವಕುಮಾರ ಭೂಶೆಟ್ಟಿ ನಿರೂಪಿಸಿದರು. ದುರ್ಗೇಶ ಎಂ. ವಂದಿಸಿದರು. ವಿನೀತ ಭೂಶೆಟ್ಟಿ ಪ್ರಾರ್ಥಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>