ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ನಿತೇಶ ‘ಸೋಂಕು ನಿಯಂತ್ರಿಸಲು ಜಿಲ್ಲೆಯ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕಿಮ್ಸ್ನಲ್ಲಿ 250 ಬೆಡ್ಗಳು ಈಗಾಗಲೇ ಸಿದ್ಧಗೊಂಡಿವೆ. ಸದ್ಯಕ್ಕೆ ನಿತ್ಯ 300 ಸ್ವಾಬ್ ಪರೀಕ್ಷೆ ಮಾಡಲಾಗುತ್ತಿದ್ದು, ಇದನ್ನು ಹಂತಹಂತವಾಗಿ ಹೆಚ್ಚಿಸಲಾಗುತ್ತದೆ. ಕಿಮ್ಸ್ನ ಮೇಲಿನ ಭಾರ ಕಡಿಮೆ ಮಾಡುವ ಉದ್ದೇಶದಿಂದ ಸೋಂಕಿನ ಲಕ್ಷಣಗಳು ಇಲ್ಲದ ಸೋಂಕಿತರನ್ನು ಆಯುರ್ವೇದ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೇನೆ’ ಎಂದರು.