<p><strong>ಹುಬ್ಬಳ್ಳಿ:</strong> ‘ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಿರುವುದು ಸ್ವಾಗತಾರ್ಹ’ ಎಂದು ವರೂರಿನ ಗುಣಧರನಂದಿ ಮಹಾರಾಜರು ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕಾನೂನು, ಸರ್ಕಾರದ ಮೇಲೆ ವಿಶ್ವಾಸ ಇದೆ. ಪ್ರಕರಣದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗುತ್ತಿದೆ. ಆದಷ್ಟು ಬೇಗ ತನಿಖೆ ಮುಗಿಸಬೇಕು’ ಎಂದರು.</p>.<p>‘ತನಿಖೆ ವರದಿಯಿಂದ ಸತ್ಯಾಂಶ ತಿಳಿದ ಬಳಿಕ ಮಂಜುನಾಥಸ್ವಾಮಿಯ ಲಕ್ಷಾಂತರ ಭಕ್ತರ ಸೇರಿಸಿ ವಿಜಯೋತ್ಸವ ಆಚರಿಸಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲಾಗುವುದು’ ಎಂದರು.</p>.<p>‘ವೀರೇಂದ್ರ ಹೆಗ್ಗಡೆಯವರು ಸತ್ಯ, ನ್ಯಾಯದ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಅವರೊಂದಿಗೆ ಎರಡು ದಶಕಗಳ ಒಡನಾಟವಿದೆ. ಹೆಗ್ಗಡೆಯವರ ಶಿಕ್ಷಣ, ಸಮಾಜಸೇವೆ ಕಾರ್ಯ ಸಹಿಸಿಕೊಳ್ಳಲು ಕೆಲವರಿಗೆ ಆಗುತ್ತಿಲ್ಲ. ಹೀಗಾಗಿ ಕಳಂಕ ತರುವ ಷಡ್ಯಂತ್ರ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>‘ಜೈನ ಧರ್ಮ, ರಾಜ ಮಹಾರಾಜರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿರುವುದನ್ನು ಖಂಡಿಸಿ ಹೋರಾಟ ರೂಪಿಸಲು ಆಗಸ್ಟ್ 10ರಂದು ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜೈನ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಿರುವುದು ಸ್ವಾಗತಾರ್ಹ’ ಎಂದು ವರೂರಿನ ಗುಣಧರನಂದಿ ಮಹಾರಾಜರು ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕಾನೂನು, ಸರ್ಕಾರದ ಮೇಲೆ ವಿಶ್ವಾಸ ಇದೆ. ಪ್ರಕರಣದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗುತ್ತಿದೆ. ಆದಷ್ಟು ಬೇಗ ತನಿಖೆ ಮುಗಿಸಬೇಕು’ ಎಂದರು.</p>.<p>‘ತನಿಖೆ ವರದಿಯಿಂದ ಸತ್ಯಾಂಶ ತಿಳಿದ ಬಳಿಕ ಮಂಜುನಾಥಸ್ವಾಮಿಯ ಲಕ್ಷಾಂತರ ಭಕ್ತರ ಸೇರಿಸಿ ವಿಜಯೋತ್ಸವ ಆಚರಿಸಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲಾಗುವುದು’ ಎಂದರು.</p>.<p>‘ವೀರೇಂದ್ರ ಹೆಗ್ಗಡೆಯವರು ಸತ್ಯ, ನ್ಯಾಯದ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಅವರೊಂದಿಗೆ ಎರಡು ದಶಕಗಳ ಒಡನಾಟವಿದೆ. ಹೆಗ್ಗಡೆಯವರ ಶಿಕ್ಷಣ, ಸಮಾಜಸೇವೆ ಕಾರ್ಯ ಸಹಿಸಿಕೊಳ್ಳಲು ಕೆಲವರಿಗೆ ಆಗುತ್ತಿಲ್ಲ. ಹೀಗಾಗಿ ಕಳಂಕ ತರುವ ಷಡ್ಯಂತ್ರ ನಡೆಯುತ್ತಿದೆ’ ಎಂದು ತಿಳಿಸಿದರು.</p>.<p>‘ಜೈನ ಧರ್ಮ, ರಾಜ ಮಹಾರಾಜರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿರುವುದನ್ನು ಖಂಡಿಸಿ ಹೋರಾಟ ರೂಪಿಸಲು ಆಗಸ್ಟ್ 10ರಂದು ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜೈನ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>