<p><strong>ಹುಬ್ಬಳ್ಳಿ:</strong> ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿಯು ಕೂಡಲೇ ಮಧ್ಯಂತರ ವರದಿ ಪ್ರಕಟಿಸಬೇಕು ಎಂದು ಜೈನ ಸಮಾಜದ ಮುಖಂಡರು ಆಗ್ರಹಿಸಿದರು.</p>.<p>ಇಲ್ಲಿನ ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಭಾನುವಾರ ನಡೆದ ಜೈನ ಸಮಾಜದ ಮುಖಂಡರು, ಜೈನ ಮುನಿಗಳ ಸಭೆಯಲ್ಲಿ, ವಿವಿಧ ಬೇಡಿಕೆಗಳ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.</p>.<p>ಪ್ರಕರಣದ ಸಾಕ್ಷಿ ದೂರುದಾರ ಹೇಳಿದ್ದ ಬಹುತೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದು ಹೀಗೆಯೇ ಮುಂದುವರಿದರೆ ಮಂಜುನಾಥಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸುವ ಅಪಾಯವಿದೆ ಎಂದು ಮುಖಂಡರು ಸಭೆಯಲ್ಲಿ ಹೇಳಿದರು. </p>.<p>ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ ಗಿರೀಶ ಮಟ್ಟೆಣ್ಣವರ ಕೂಡಲೇ ಕ್ಷಮೆ ಕೇಳಬೇಕು. ಆತನ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಜೈನ ಸಮಾಜದ ವತಿಯಿಂದ ಪ್ರಕರಣದ ದಾಖಲಿಸಲಾಗುವುದು. ಕೂಡಲೇ ಆತನನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಧಾರವಾಡ ಕಲಾಮಂದಿರದಿಂದ ಜಿಲ್ಲಾದಿಕಾರಿ ಕಚೇರಿವರೆಗೆ ಸೋಮವಾರ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ 1ರಂದು ಧಾರವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ವೀರಕುಮಾರ ಪಾಟೀಲ, ವೆರ್ನಾಳ್ ತಾಳಿಕೋಟಿ, ವಿನಯ್ ಶೆಟ್ಟಿ, ದೇವಿಂದ್ರ ಕಾಗೇನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿಯು ಕೂಡಲೇ ಮಧ್ಯಂತರ ವರದಿ ಪ್ರಕಟಿಸಬೇಕು ಎಂದು ಜೈನ ಸಮಾಜದ ಮುಖಂಡರು ಆಗ್ರಹಿಸಿದರು.</p>.<p>ಇಲ್ಲಿನ ವರೂರಿನ ನವಗ್ರಹತೀರ್ಥ ಕ್ಷೇತ್ರದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಭಾನುವಾರ ನಡೆದ ಜೈನ ಸಮಾಜದ ಮುಖಂಡರು, ಜೈನ ಮುನಿಗಳ ಸಭೆಯಲ್ಲಿ, ವಿವಿಧ ಬೇಡಿಕೆಗಳ ಕುರಿತು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.</p>.<p>ಪ್ರಕರಣದ ಸಾಕ್ಷಿ ದೂರುದಾರ ಹೇಳಿದ್ದ ಬಹುತೇಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ. ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದು ಹೀಗೆಯೇ ಮುಂದುವರಿದರೆ ಮಂಜುನಾಥಸ್ವಾಮಿ ದೇವಸ್ಥಾನವನ್ನು ನೆಲಸಮಗೊಳಿಸುವ ಅಪಾಯವಿದೆ ಎಂದು ಮುಖಂಡರು ಸಭೆಯಲ್ಲಿ ಹೇಳಿದರು. </p>.<p>ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದ ಗಿರೀಶ ಮಟ್ಟೆಣ್ಣವರ ಕೂಡಲೇ ಕ್ಷಮೆ ಕೇಳಬೇಕು. ಆತನ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಜೈನ ಸಮಾಜದ ವತಿಯಿಂದ ಪ್ರಕರಣದ ದಾಖಲಿಸಲಾಗುವುದು. ಕೂಡಲೇ ಆತನನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.</p>.<p>ಧಾರವಾಡ ಕಲಾಮಂದಿರದಿಂದ ಜಿಲ್ಲಾದಿಕಾರಿ ಕಚೇರಿವರೆಗೆ ಸೋಮವಾರ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಸೆಪ್ಟೆಂಬರ್ 1ರಂದು ಧಾರವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ವೀರಕುಮಾರ ಪಾಟೀಲ, ವೆರ್ನಾಳ್ ತಾಳಿಕೋಟಿ, ವಿನಯ್ ಶೆಟ್ಟಿ, ದೇವಿಂದ್ರ ಕಾಗೇನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>