<p><strong>ಧಾರವಾಡ</strong>: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ, ನಿಯಮಬಾಹಿರವಾಗಿ ವರ್ಗಾವಣೆ ನಡೆದಿರುವ ಆರೋಪಗಳಿದ್ದು, ಈ ಬಗ್ಗೆ ತನಿಖೆಗೆ ಕ್ರಮ ವಹಿಸುವಂತೆ ಸರ್ಕಾರ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಿವಸೇನಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ಆಗ್ರಹಿಸಿದರು. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023 ಸೆ.26ರಂದು ನಡೆದ ವಿವಿಧ ಹುದ್ದೆ ನೇಮಕಾತಿಯ ದಾಖಲೆಗಳನ್ನು ವಿಶ್ವವಿದ್ಯಾಲಯದವರು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು. </p>.<p>ನಿಯಮ ಮೀರಿ ವರ್ಗಾವಣೆ ನಡೆಸಲಾಗಿದೆ, ಆರ್ಥಿಕವಾಗಿ ಹೊರೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಂದ ನಷ್ಟ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು. </p>.<p>ಕೃಷಿ ವಿಶ್ವವಿದ್ಯಾಲಯದಲ್ಲಿ ಅಕ್ರಮಗಳು ನಡೆದಿದ್ದು, ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು. </p>.<p>ಶಿವಸೇನಾ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಾರ್ಥ ಶಿವಶರಣ ಇದ್ದರು.</p>
<p><strong>ಧಾರವಾಡ</strong>: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ, ನಿಯಮಬಾಹಿರವಾಗಿ ವರ್ಗಾವಣೆ ನಡೆದಿರುವ ಆರೋಪಗಳಿದ್ದು, ಈ ಬಗ್ಗೆ ತನಿಖೆಗೆ ಕ್ರಮ ವಹಿಸುವಂತೆ ಸರ್ಕಾರ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಿವಸೇನಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ಆಗ್ರಹಿಸಿದರು. </p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023 ಸೆ.26ರಂದು ನಡೆದ ವಿವಿಧ ಹುದ್ದೆ ನೇಮಕಾತಿಯ ದಾಖಲೆಗಳನ್ನು ವಿಶ್ವವಿದ್ಯಾಲಯದವರು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು. </p>.<p>ನಿಯಮ ಮೀರಿ ವರ್ಗಾವಣೆ ನಡೆಸಲಾಗಿದೆ, ಆರ್ಥಿಕವಾಗಿ ಹೊರೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಂದ ನಷ್ಟ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು. </p>.<p>ಕೃಷಿ ವಿಶ್ವವಿದ್ಯಾಲಯದಲ್ಲಿ ಅಕ್ರಮಗಳು ನಡೆದಿದ್ದು, ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು. </p>.<p>ಶಿವಸೇನಾ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಾರ್ಥ ಶಿವಶರಣ ಇದ್ದರು.</p>