<p>ಧಾರವಾಡ: ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಅಗ್ರಹಿಸಿ ಸೋಮವಾರ ಆಕಾಶವಾಣಿ ಕೇಂದ್ರದ ಎದುರು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.</p>.<p>ಧಾರವಾಡ ಆಕಾಶವಾಣಿ ಕೇಂದ್ರವು ದಶಕಗಳಿಂದ ಉತ್ತರ ಕರ್ನಾಟಕದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿನ ಸುದ್ದಿ ವಿಭಾಗವನ್ನು ಸ್ಥಳಾಂತರಿಸುವುದು ಈ ಭಾಗದ ಸಾಂಸ್ಕೃತಿಕ ಅಸ್ಮಿತೆಗೆ ಧಕ್ಕೆ ತರುತ್ತದೆ. ಕೂಡಲೇ ಆದೇಶವನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸರ್ಕಾರವು ಆಡಳಿತವನ್ನು ಜನರಿಗೆ ಹತ್ತಿರವಾಗಿಸಲು ವಿಕೇಂದ್ರೀಕರಣಕ್ಕೆಒತ್ತು ನೀಡಬೇಕು. ಎಲ್ಲವನ್ನೂ ಬೆಂಗಳೂರಿನಲ್ಲೇ ಕೇಂದ್ರೀಕೃತ ಮಾಡುವುದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತದೆ. ಧಾರವಾಡದ ಕೇಂದ್ರವು ಎಲ್ಲ ಮೂಲಸೌಕರ್ಯಗಳನ್ನು ಹೊಂದಿದ್ದು, ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತಾತ್ಮಕ ಕಾರಣದಿಂದ ಸ್ಥಳಾಂತರ ಮಾಡುವುದು ಅವೈಜ್ಞಾನಿಕ ನಿರ್ಧಾರವಾಗಿದೆ ಎಂದರು.</p>.<p>ಕೂಡಲೇ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘಟನೆ ಜಿಲ್ಲಾ ಉಪಾಧ್ಯಕ್ಷ ನಿಯಾಜ್ ಅಹ್ಮದ್ ನಿಪ್ಪಾಣಿ, ಲಕ್ಷ್ಮಣ ಬಕ್ಕಾಯಿ, ವಿನಾಯಕ, ಸಲಿಂ ಮುಲ್ಲಾ, ಎಸ್.ಎಂ. ರೋಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-24-916813405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಅಗ್ರಹಿಸಿ ಸೋಮವಾರ ಆಕಾಶವಾಣಿ ಕೇಂದ್ರದ ಎದುರು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.</p>.<p>ಧಾರವಾಡ ಆಕಾಶವಾಣಿ ಕೇಂದ್ರವು ದಶಕಗಳಿಂದ ಉತ್ತರ ಕರ್ನಾಟಕದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿನ ಸುದ್ದಿ ವಿಭಾಗವನ್ನು ಸ್ಥಳಾಂತರಿಸುವುದು ಈ ಭಾಗದ ಸಾಂಸ್ಕೃತಿಕ ಅಸ್ಮಿತೆಗೆ ಧಕ್ಕೆ ತರುತ್ತದೆ. ಕೂಡಲೇ ಆದೇಶವನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸರ್ಕಾರವು ಆಡಳಿತವನ್ನು ಜನರಿಗೆ ಹತ್ತಿರವಾಗಿಸಲು ವಿಕೇಂದ್ರೀಕರಣಕ್ಕೆಒತ್ತು ನೀಡಬೇಕು. ಎಲ್ಲವನ್ನೂ ಬೆಂಗಳೂರಿನಲ್ಲೇ ಕೇಂದ್ರೀಕೃತ ಮಾಡುವುದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತದೆ. ಧಾರವಾಡದ ಕೇಂದ್ರವು ಎಲ್ಲ ಮೂಲಸೌಕರ್ಯಗಳನ್ನು ಹೊಂದಿದ್ದು, ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತಾತ್ಮಕ ಕಾರಣದಿಂದ ಸ್ಥಳಾಂತರ ಮಾಡುವುದು ಅವೈಜ್ಞಾನಿಕ ನಿರ್ಧಾರವಾಗಿದೆ ಎಂದರು.</p>.<p>ಕೂಡಲೇ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘಟನೆ ಜಿಲ್ಲಾ ಉಪಾಧ್ಯಕ್ಷ ನಿಯಾಜ್ ಅಹ್ಮದ್ ನಿಪ್ಪಾಣಿ, ಲಕ್ಷ್ಮಣ ಬಕ್ಕಾಯಿ, ವಿನಾಯಕ, ಸಲಿಂ ಮುಲ್ಲಾ, ಎಸ್.ಎಂ. ರೋಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-24-916813405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>