<p><strong>ಧಾರವಾಡ:</strong> ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಎಕೆಎಸ್ಎಸ್ಎ) ಪ್ರತಿಭಟನೆ ತಡೆ ನಿಟ್ಟಿನಲ್ಲಿ ಸೋಮವಾರ ನಗರದ ವಿವಿಧೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.</p>.<p>ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಸಂಘಟನೆಯವರು ಪ್ರತಿಭಟನೆಗೆ ಮುಂದಾದರೆ ತಡೆಯುವ ನಿಟ್ಟಿನಲ್ಲಿ ಶ್ರೀನಗರ, ಸಪ್ತಾಪುರ ಸಹಿತ ವಿವಿಧೆಡೆಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಸಪ್ತಾಪುರದ ವಿವಿಧೆಡೆ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳ ಸಂಚಾರವನ್ನು ಮಧ್ಯಾಹ್ನದವರೆಗೆ ನಿರ್ಬಂಧಿಸಲಾಗಿತ್ತು. ಮಹಾನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾವಿ ಸ್ಥಳದಲ್ಲಿದ್ದು ನಿಗಾ ವಹಿಸಿದ್ದರು.</p>.<p>ಸೋಮವಾರ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯವರು ಹೇಳಿದ್ದರು. ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೈಬಿಟ್ಟಿರುವುದಾಗಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಎಕೆಎಸ್ಎಸ್ಎ) ಪ್ರತಿಭಟನೆ ತಡೆ ನಿಟ್ಟಿನಲ್ಲಿ ಸೋಮವಾರ ನಗರದ ವಿವಿಧೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.</p>.<p>ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಸಂಘಟನೆಯವರು ಪ್ರತಿಭಟನೆಗೆ ಮುಂದಾದರೆ ತಡೆಯುವ ನಿಟ್ಟಿನಲ್ಲಿ ಶ್ರೀನಗರ, ಸಪ್ತಾಪುರ ಸಹಿತ ವಿವಿಧೆಡೆಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಸಪ್ತಾಪುರದ ವಿವಿಧೆಡೆ ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳ ಸಂಚಾರವನ್ನು ಮಧ್ಯಾಹ್ನದವರೆಗೆ ನಿರ್ಬಂಧಿಸಲಾಗಿತ್ತು. ಮಹಾನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾವಿ ಸ್ಥಳದಲ್ಲಿದ್ದು ನಿಗಾ ವಹಿಸಿದ್ದರು.</p>.<p>ಸೋಮವಾರ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯವರು ಹೇಳಿದ್ದರು. ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೈಬಿಟ್ಟಿರುವುದಾಗಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>